ಮೈಸೂರು: ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಗ್ರಾಮದಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಡೆದಿದೆ.
ಮೃತಪಟ್ಟವರನ್ನು ರತ್ನಮ್ಮ (55) ಎಂದು ಗುರುತಿಸಲಾಗಿದೆ.
ಮಧ್ಯಾಹ್ನದ ವೇಳೆ ದನ ಮೇಯಿಸಲು ಕಾಡಂಚಿಗೆ ತೆರಳಿದ್ದಾಗ ರತ್ನಮ್ಮ ಅವರ ಮೇಲೆ ಹುಲಿ ದಾಳಿ ನಡೆಸಿದೆ. ಅಲ್ಲದೆ, ರತ್ನಮ್ಮ ಅವರನ್ನು ಕೊಂದು ಎಡಭಾಗದ ದೇಹವನ್ನು ತಿಂದುಹಾಕಿ ಹೋಗಿದೆ. ಇದು ಸಹಜವಾಗಿ ಅಲ್ಲಿನ ಜನರನ್ನು ಭೀತಿಗೊಳಿಸಿದೆ.
ನಂಜನಗೂಡು ತಾಲೂಕಿನಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರೆದಿದೆ. 20 ದಿನಗಳ ಹಿಂದೆ ಜೇನುಕಟ್ಟೆ ಗ್ರಾಮದಲ್ಲಿ ಹುಲಿಯೊಂದು ಹಸುವನ್ನು ಕೊಂದು ಅದರ ಮಾಲೀಕ ಮೇಲೆ ದಾಳಿ ನಡೆಸಿತ್ತು. ಬಳಿಕ ಇದೇ ಪ್ರದೇಶದಲ್ಲಿ ಹುಲಿ ದಾಳಿಗೆ ಎತ್ತು ಬಲಿಯಾಗಿತ್ತು. ಇದೀಗ ಮಹಿಳೆಯೊಬ್ಬರು ಬಲಿಯಾಗಿದ್ದು, ಸಹಜವಾಗಿ ಕೃಷಿ ಚಟುವಟಿಕೆ, ಹಸು ಮೇಯಿಸಲು ತೆರಳಲು ಗ್ರಾಮಸ್ಥರು ಆತಂಕಪಡುತ್ತಿದ್ದಾರೆ.