News Karnataka Kannada
Thursday, May 02 2024
ಕ್ರೈಮ್

ಓವರ್‌ ಟೇಕ್‌ ಅವಾಂತರ: ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ

Woman killed, two seriously injured in overtake accident
Photo Credit : News Kannada

ಕುಂದಾಪುರ: ಕಾರೊಂದು ಮತ್ತೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು, ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಸಾವನ್ನಪ್ಪಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ರಾಜ್ಯ ಹೆದ್ದಾರಿ 52ರ ಕಂದಾವರ ಗ್ರಾಮದ ಮೂಡ್ಲಕಟ್ಟೆಯ ಕಂಬಳಗದ್ದೆ ಜಿ.ಪಿ.ಶೆಟ್ಟಿ ಅವರ ಮನೆಯ ಎದುರು ಸೆ.1ರ ಶುಕ್ರವಾರ ಸಂಜೆ ಈ ದುರ್ಘಟನೆ ನಡೆದಿದೆ.

ಮೃತರನ್ನು ಅಂಪಾರು ನಿವಾಸಿ ಅಂಬಿಕಾ (22) ಎಂದು ಗುರುತಿಸಲಾಗಿದೆ. ಆಕೆಯ ಸಹೋದರ ಶಾಂತಾರಾಮ ಮತ್ತು ಸಂಬಂಧಿ ನಯನಾ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ವಡೇರಹೋಬಳಿಯಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಆಟೋ ರಿಕ್ಷಾ ಮೂಡ್ಲಕಟ್ಟೆ ಸಮೀಪಕ್ಕೆ ಬರುತ್ತಿದ್ದಂತೆ ವಸಂತ ಪೂಜಾರಿ ಚಲಾಯಿಸುತ್ತಿದ್ದ ಕಾರು ಮತ್ತೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ರಿಕ್ಕಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿ ಮುಂಭಾಗದಲ್ಲಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದ ಅಂಬಿಕಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಾಂತಾರಾಮ್ ಮತ್ತು ನಯನ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು