ಕ್ರೈಮ್

ಓವರ್‌ ಟೇಕ್‌ ಅವಾಂತರ: ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಕುಂದಾಪುರ: ಕಾರೊಂದು ಮತ್ತೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು, ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಸಾವನ್ನಪ್ಪಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ರಾಜ್ಯ ಹೆದ್ದಾರಿ 52ರ ಕಂದಾವರ ಗ್ರಾಮದ ಮೂಡ್ಲಕಟ್ಟೆಯ ಕಂಬಳಗದ್ದೆ ಜಿ.ಪಿ.ಶೆಟ್ಟಿ ಅವರ ಮನೆಯ ಎದುರು ಸೆ.1ರ ಶುಕ್ರವಾರ ಸಂಜೆ ಈ ದುರ್ಘಟನೆ ನಡೆದಿದೆ.

ಮೃತರನ್ನು ಅಂಪಾರು ನಿವಾಸಿ ಅಂಬಿಕಾ (22) ಎಂದು ಗುರುತಿಸಲಾಗಿದೆ. ಆಕೆಯ ಸಹೋದರ ಶಾಂತಾರಾಮ ಮತ್ತು ಸಂಬಂಧಿ ನಯನಾ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ವಡೇರಹೋಬಳಿಯಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಆಟೋ ರಿಕ್ಷಾ ಮೂಡ್ಲಕಟ್ಟೆ ಸಮೀಪಕ್ಕೆ ಬರುತ್ತಿದ್ದಂತೆ ವಸಂತ ಪೂಜಾರಿ ಚಲಾಯಿಸುತ್ತಿದ್ದ ಕಾರು ಮತ್ತೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ರಿಕ್ಕಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿ ಮುಂಭಾಗದಲ್ಲಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದ ಅಂಬಿಕಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಾಂತಾರಾಮ್ ಮತ್ತು ನಯನ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

16 seconds ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

15 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

32 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago