ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ತನ್ನ ಸೋದರ ಸಂಬಂಧಿಯ ಯುವತಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಈ ಕೃತ್ಯವನ್ನು ಮಾಡಿದ ಯುವತಿಯ ಚಿಕ್ಕಪ್ಪನ ಮಗ ಜ್ಞಾನ್ ಪ್ರಕಾಶ್ (26) ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸಂಜೆ 6 ಗಂಟೆ ಸುಮಾರಿಗೆ ಪ್ರಕಾಶ್ ಯುವತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಎಸ್ಪಿ ಲಕ್ಷ್ಮಿ ನಿವಾಸ್ ಮಿಶ್ರಾ ಹೇಳಿದ್ದಾರೆ.
ಯವತಿಯು ಡಿಎಂ ಕಾಲೋನಿಯಲ್ಲಿರುವ ತನ್ನ ತಾಯಿಯ ಮಾವನ ಮನೆಯಲ್ಲಿ ವಾಸವಿದ್ದಳು, ಆಕೆ ಮತ್ತು ಪ್ರಕಾಶ್ ಒಂದೇ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಓದುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.
ಪೊಲೀಸರ ತನಿಖೆ ಪ್ರಕಾರ, ಜ್ಞಾನ್ ಪ್ರಕಾಶ್ ಈ ಯುವತಿಯನ್ನು ಮದುವೆಯಾಗುವುದಾಗಿ ಹೇಳಿಕೊಂಡಿದ್ದಾನೆ, ಆದರೆ ಯುವತಿ ಈ ಮದುವೆ ಒಪ್ಪಿಲ್ಲ ಎಂದು ಹೇಳಲಾಗಿದೆ. ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.