News Karnataka Kannada
Monday, April 29 2024
ಕ್ರೈಮ್

ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನ ಕೊಲೆ

ಶಿವರಾತ್ರಿ  ಹಬ್ಬದ ಸಂಭ್ರಮದಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಡಿದ ಘಟನೆ  ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ನಡೆದಿದೆ.
Photo Credit : News Kannada

ಬೆಂಗಳೂರು: ಶಿವರಾತ್ರಿ  ಹಬ್ಬದ ಸಂಭ್ರಮದಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಡಿದ ಘಟನೆ  ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ನಡೆದಿದೆ.

ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್​ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ.

ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್​ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ. ಬಳಿಕ ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್​ಗೆ ಚುಚ್ಚಿದ್ದಾರೆ. ಹಂತಕರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌಂಡ್ ಹಾರಿದ್ದ. ಅಗ ಕಾಂಪೌಂಡ್​ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು