News Karnataka Kannada
Wednesday, May 01 2024
ಕ್ರೈಮ್

ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಹೇಳಿ ವಂಚಿಸುತ್ತಿದ್ದ ಯೂಸೂಫ್‌ ಅಂದರ್‌

He was offered a job in Qatar University and offered Rs 2 lakh. Fraud
Photo Credit : News Kannada

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿಜಯೇಂದ್ರ ಹೆಸರು ಹೇಳಿಕೊಂಡು ಹಲವರನ್ನು ವಂಚಿಸಿದ ಯೂಸೂಫ್‌ ಎಂಬಾತನನ್ನು ಮಲ್ಲೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ನಂತರ ಆತನನ್ನು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಬಿಜೆಪಿ ಹೈಕಮಾಂಡ್‌ ನಾಯಕರು ತನಗೆ ಪರಿಚಯವಿದ್ದು, ರಾಜಕೀಯವಾಗಿ ಕೆಲಸ ಮಾಡಿಸುವುದಾಗಿ ಹಲವರಿಂದ ಹಣ ಪಡೆದು ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಅದೇ ರೀತಿ ಈತ ಬ್ಯಾಂಕ್‌ ಗಳಲ್ಲಿ ಸಾಲ ಕೊಡಿಸುವುದಾಗಿ ಉದ್ಯಮಿಗಳಿಂದ ದಾಖಲೆಗಳನ್ನು ಪಡೆದು ವಂಚಿಸುತ್ತಿದ್ದ ಎಂಬುದು ತಿಳಿದು ಬಂದಿದೆ.

ಆರೋಪಿ ಇತ್ತೀಚೆಗೆ ಹೋಟೆಲ್‌ ಉದ್ಯಮಿ ಶಾಜಿ ಕೃಷ್ಣನ್‌ ಎಂಬವರಿಗೆ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ, ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ ಕೃಷ್ಣನ್‌ ಅವರನ್ನು ಬ್ಯಾಂಕ್‌ಗೂ ಕರೆದುಕೊಂಡು ಹೋಗಿ ಅರ್ಜಿಗಳಿಗೆ ಸಹಿ ಮಾಡಿಸಿದ್ದಾನೆ. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದುಕೊಂಡಿದ್ದ. ಅದನ್ನು ಸರಿಯಾದ ಸಮಯಕ್ಕೆ ಕಟ್ಟದೆ ಸುಸ್ತಿದಾರನಾಗಿದ್ದ. ಈ ಮಧ್ಯೆ ಕಾರ್ಯನಿಮಿತ್ತ ಕೃಷ್ಣನ್‌ ಬ್ಯಾಂಕ್‌ಗೆ ಹೋದಾಗ ಈ ವಿಚಾರ ಬೆಳಕಿಗೆ ಬಂದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು