ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿಜಯೇಂದ್ರ ಹೆಸರು ಹೇಳಿಕೊಂಡು ಹಲವರನ್ನು ವಂಚಿಸಿದ ಯೂಸೂಫ್ ಎಂಬಾತನನ್ನು ಮಲ್ಲೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ನಂತರ ಆತನನ್ನು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಬಿಜೆಪಿ ಹೈಕಮಾಂಡ್ ನಾಯಕರು ತನಗೆ ಪರಿಚಯವಿದ್ದು, ರಾಜಕೀಯವಾಗಿ ಕೆಲಸ ಮಾಡಿಸುವುದಾಗಿ ಹಲವರಿಂದ ಹಣ ಪಡೆದು ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಅದೇ ರೀತಿ ಈತ ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ಉದ್ಯಮಿಗಳಿಂದ ದಾಖಲೆಗಳನ್ನು ಪಡೆದು ವಂಚಿಸುತ್ತಿದ್ದ ಎಂಬುದು ತಿಳಿದು ಬಂದಿದೆ.
ಆರೋಪಿ ಇತ್ತೀಚೆಗೆ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎಂಬವರಿಗೆ ರಾಷ್ಟ್ರೀಕೃತ ಬ್ಯಾಂಕ್ವೊಂದರಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ, ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ ಕೃಷ್ಣನ್ ಅವರನ್ನು ಬ್ಯಾಂಕ್ಗೂ ಕರೆದುಕೊಂಡು ಹೋಗಿ ಅರ್ಜಿಗಳಿಗೆ ಸಹಿ ಮಾಡಿಸಿದ್ದಾನೆ. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದುಕೊಂಡಿದ್ದ. ಅದನ್ನು ಸರಿಯಾದ ಸಮಯಕ್ಕೆ ಕಟ್ಟದೆ ಸುಸ್ತಿದಾರನಾಗಿದ್ದ. ಈ ಮಧ್ಯೆ ಕಾರ್ಯನಿಮಿತ್ತ ಕೃಷ್ಣನ್ ಬ್ಯಾಂಕ್ಗೆ ಹೋದಾಗ ಈ ವಿಚಾರ ಬೆಳಕಿಗೆ ಬಂದಿತ್ತು.