ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ರಿಂದ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
ಈ ಬಾರಿ ಪರೀಕ್ಷೆಯಲ್ಲಿ ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ & ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್, ಬಿಎಸ್ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆದಿತ್ತು. ಈ ಬಾರಿ ಸಿಇಟಿಯಲ್ಲೂ ಬಾಲಕಿಯರದ್ದೇ ಮೇಲುಗೈ. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ ಸ್ಥಾನ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಸಮೃದ್ಧ್ ಶೆಟ್ಟಿ ತೃತೀಯ ಸ್ಥಾನ, ಎಸ್.ಸುಮೇಧ್ಗೆ 4ನೇ ಸ್ಥಾನ, ಮಾಧವ ಸೂರ್ಯಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ.
ಒಟ್ಟು 129,780 ಬಾಲಕಿಯರು ಕೆಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ, 94,946 ವಿದ್ಯಾರ್ಥಿನಿಯರು BNYS ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ, 106,804 ವಿದ್ಯಾರ್ಥಿನಿಯರು ಎಂಜಿನಿಯರಿಂಗ್ನಲ್ಲಿ ಅರ್ಹತೆ ಪಡೆದಿದ್ದಾರೆ, 93,120 ವಿದ್ಯಾರ್ಥಿನಿಯರು BSc ಕೃಷಿ ಮತ್ತು 94,960 ವಿದ್ಯಾರ್ಥಿನಿಯರು ವೆಟರ್ನರಿ ಕೋರ್ಸ್ಗೆ ಅರ್ಹತೆ ಪಡೆದಿದ್ದಾರೆ. ಹೆಚ್ಚುವರಿಯಾಗಿ, 108,760 ವಿದ್ಯಾರ್ಥಿನಿಯರು ಬಿಫಾರ್ಮ ಕೋರ್ಸ್ಗೆ ಅರ್ಹರಾಗಿದ್ದಾರೆ ಮತ್ತು 108,791 ವಿದ್ಯಾರ್ಥಿನಿಯರು ಫಾರ್ಮಡಿಗೆ ಅರ್ಹತೆ ಪಡೆದಿದ್ದಾರೆ. BSc ನರ್ಸಿಂಗ್ ಕ್ಷೇತ್ರದಲ್ಲಿ 94,972 ವಿದ್ಯಾರ್ಥಿನಿಯರು ಅರ್ಹತೆ ಪಡೆದಿದ್ದಾರೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು karresults.nic.in ನಲ್ಲಿ ಪರಿಶೀಲಿಸಬಹುದು.