ಬಂಟ್ವಾಳ: ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇದರ ಪಿರಿಯೋಡೆಂಟಿಕ್ಸ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯನ್ನು ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಸಲಾಯಿತು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡು ಕಾಲಕಾಲಕ್ಕೆ ಸರಿಯಾಗಿ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಪಿರಿಯೋಡೆಂಟಿಕ್ಸ್ ವಿಭಾಗ ಮುಖ್ಯಸ್ಥೆ ಪ್ರೊ. ಡಾ. ಅಮಿತಾ ರಮೇಶ್ ಶುಭ ಕೋರಿದರು. ಸಂಯೋಜಕ ಡಾ. ಬಿಜು ಥೋಮಸ್, ಸೇವಾಂಜಲಿ ಆರೋಗ್ಯ ಕೇಂದ್ರದ ಡಾ. ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಘವೇಂದ್ರ ವಂಶಿ ಒಸಡಿನ ಆರೋಗ್ಯ ಮತ್ತು ಮಧುಮೇಹದ ಬಗ್ಗೆ ಮಾಹಿತಿ ನೀಡಿದರು. ತಾರನಾಥ ಕೊಟ್ಟಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೇವಾಂಜಲಿ ದಂತ ವಿಜ್ಞಾನ ಕೆಂದ್ರದ ವೈದ್ಯ ಡಾ. ರಂಜಿತ್ ಶೆಟ್ಟಿ ವಂದಿಸಿದರು. ಬಳಿಕ ಮಧುಮೇಹ ಹಾಗೂ ವಸಡಿನ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿರಿಯೋಡೆಂಟಿಕ್ಸ್ ವಿಭಾಗ ಮುಖ್ಯಸ್ಥೆ ಪ್ರೊ. ಡಾ. ಅಮಿತಾ ರಮೇಶ್ ಸಂಯೋಜಕ ಡಾ. ಬಿಜು ಥೋಮಸ್, ಸೇವಾಂಜಲಿ ಆರೋಗ್ಯ ಕೇಂದ್ರದ ಡಾ. ಚೇತನ್ ಉಪಸ್ಥಿತರಿದ್ದರು.