News Karnataka Kannada
Friday, May 03 2024
ಮಂಗಳೂರು

ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್  ಸೈನ್ಸ್ನ ಪಿರಿಯೋಡೆಂಟಿಕ್ಸ್ ವಿಭಾಗದಿಂದ ವಿಶ್ವ ಮಧುಮೇಹ ದಿನಾಚರಣೆ

Bantwal News
Photo Credit :

ಬಂಟ್ವಾಳ: ಎ.ಬಿ.ಶೆಟ್ಟಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್  ಸೈನ್ಸ್ ಇದರ ಪಿರಿಯೋಡೆಂಟಿಕ್ಸ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯನ್ನು ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಸಲಾಯಿತು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್  ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡು ಕಾಲಕಾಲಕ್ಕೆ ಸರಿಯಾಗಿ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳಬೇಕು ಎಂದು ತಿಳಿಸಿದರು.

ಪಿರಿಯೋಡೆಂಟಿಕ್ಸ್ ವಿಭಾಗ ಮುಖ್ಯಸ್ಥೆ ಪ್ರೊ. ಡಾ. ಅಮಿತಾ  ರಮೇಶ್ ಶುಭ ಕೋರಿದರು. ಸಂಯೋಜಕ ಡಾ. ಬಿಜು ಥೋಮಸ್, ಸೇವಾಂಜಲಿ ಆರೋಗ್ಯ ಕೇಂದ್ರದ ಡಾ. ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಘವೇಂದ್ರ ವಂಶಿ ಒಸಡಿನ ಆರೋಗ್ಯ ಮತ್ತು ಮಧುಮೇಹದ ಬಗ್ಗೆ ಮಾಹಿತಿ ನೀಡಿದರು.  ತಾರನಾಥ ಕೊಟ್ಟಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೇವಾಂಜಲಿ ದಂತ ವಿಜ್ಞಾನ ಕೆಂದ್ರದ ವೈದ್ಯ ಡಾ. ರಂಜಿತ್ ಶೆಟ್ಟಿ ವಂದಿಸಿದರು. ಬಳಿಕ ಮಧುಮೇಹ ಹಾಗೂ ವಸಡಿನ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ  ಕುಮಾರ್ ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿರಿಯೋಡೆಂಟಿಕ್ಸ್ ವಿಭಾಗ ಮುಖ್ಯಸ್ಥೆ ಪ್ರೊ. ಡಾ. ಅಮಿತಾ ರಮೇಶ್ ಸಂಯೋಜಕ ಡಾ. ಬಿಜು ಥೋಮಸ್, ಸೇವಾಂಜಲಿ ಆರೋಗ್ಯ ಕೇಂದ್ರದ ಡಾ. ಚೇತನ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು