News Karnataka Kannada
Thursday, May 02 2024
ಆರೋಗ್ಯ

ಬಿಸಿಲಿಗೆ ಹಣ್ಣು ತರಕಾರಿ ಸೇವಿಸಿ

Photo Credit :

ಬಿಸಿಲಿಗೆ ಹಣ್ಣು ತರಕಾರಿ ಸೇವಿಸಿ

ಮುಂದಿನ ದಿನಗಳು ಬೇಸಿಗೆಯ ದಿನಗಳ ಹಾಗಾಗಿ ನಮ್ಮ ಶರೀದಲ್ಲೂ ಒಂದಷ್ಟು ಬದಲಾವಣೆಗಳು ಕಂಡು ಬರುತ್ತವೆ.  ಹವಾಮಾನ ಬದಲಾಗುತ್ತಿದ್ದಂತೆಯೇ ನಮ್ಮ ದೇಹ(ಆರೋಗ್ಯ)ದಲ್ಲಿ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲವೊಮ್ಮೆ ವಾತಾವರಣಕ್ಕೆ ತಕ್ಕಂತೆ ನಾವು ಕೂಡ ಕೆಲವೊಂದು ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದು ಅಗತ್ಯ.

ಈಗ ಬೆಳಿಗ್ಗೆ ಚಳಿ ಇದ್ದರೆ ಮಧ್ಯಾಹ್ನದ ವೇಳೆಗೆ ಸೆಖೆ ಕಾಣಿಸಿಕೊಂಡು ಮೈಯೆಲ್ಲ ಉರಿಯುವಂತೆ ಮಾಡಿ ಬಿಡುತ್ತದೆ. ಬಿಸಿಲಲ್ಲೆ ಅಡ್ಡಾಡುವಾಗ ಆಗಿಂದಾಗ್ಗೆ ಬಾಯಾರಿಕೆ ನಮ್ಮನ್ನು ಕಾಡುತ್ತದೆ. ಎಷ್ಟು ನೀರು ಕುಡಿದರೂ ಮತ್ತೆ ಬೇಕೆನಿಸುತ್ತದೆ. ಶರೀರದಲ್ಲಿ ಉಷ್ಣದ ಅಂಶ ಹೆಚ್ಚುತ್ತದೆ. ಇದು ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ಬಿಸಿಲಿದ್ದಾಗ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ, ಹೆಚ್ಚಾಗಿ ಹಣ್ಣು-ತರಕಾರಿ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಇವು ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗುತ್ತವೆ.  ಇದರಲ್ಲಿರುವ ಲವಣಗಳು, ವಿಟಮಿನ್ ಗಳಂತಹ ಪೌಷ್ಠಿಕ ಪದಾರ್ಥಗಳು ಶರೀರಕ್ಕೆ ಪೋಷಕ ಶಕ್ತಿಯನ್ನು ನೀಡುತ್ತವೆ. ನಮ್ಮ ಆಹಾರದೊಂದಿಗೆ ಕನಿಷ್ಠ ಒಂದು ರೀತಿಯ ಹಣ್ಣನ್ನಾದರೂ ಸೇವಿಸುವುದು ಒಳ್ಳೆಯದು. ಕೆಲವು ಹಣ್ಣುಗಳನ್ನು ನಿಯಮಬದ್ಧವಾಗಿ ಸೇವಿಸುತ್ತಾ ಬಂದರೆ ಮಧುಮೇಹ, ಬೊಜ್ಜು, ಎದೆನೋವು ಮತ್ತಿತರ  ಕಾಯಿಲೆಗಳು ದೂರವಾಗುವುವು. ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ  ಹೆಚ್ಚಿನ ಬೇಡಿಕೆ ಕಂಡು ಬರುತ್ತದೆ. ಏಕೆಂದರೆ ಈ ಹಣ್ಣು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿ ಹೇರಳವಾದ ಲವಣಗಳು ಹಾಗೂ ವಿಟಮಿನ್ಗಳಿವೆ. ಅಷ್ಟೇ ಅಲ್ಲ ದ್ರವ ಪದಾರ್ಥವೂ ಇದೆ. ಬಾಳೆಹಣ್ಣಿನಲ್ಲಿರುವ ವಿಟಮಿನ್ ಗಳು ಜೀರ್ಣಕ್ರಿಯೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯವನ್ನು ವೃದ್ಧಿಸುವ ಪೌಷ್ಠಿಕಾಂಶಗಳು ಹಣ್ಣು, ತರಕಾರಿಯಲ್ಲಿವೆ. ಇವು ಶರೀರದೊಳಗೆ ಸೇರಿರುವ ವಿಷಪದಾರ್ಥಗಳನ್ನು ಹೊರ ಹಾಕುತ್ತವೆ. ತಾಜಾ ಸೊಪ್ಪು, ಹಸಿಬಟಾಣಿ, ಆಲೂಗೆಡ್ಡೆ, ಟೊಮೇಟೋದೊಂದಿಗೆ ಕೂಡಿದ ಸಲಾಡ್ ಶರೀರಕ್ಕೆ ಆರೋಗ್ಯ  ನೀಡುತ್ತದೆ.

ಆಗಾಗ್ಗೆ ಸೌತೆಕಾಯಿ ತಿನ್ನುವುದು ಕೂಡ ಒಂದು ಒಳ್ಳೆಯ ಅಭ್ಯಾಸವೇ ಆಯಾಯ ಕಾಲಕ್ಕೆ ತಕ್ಕಂತೆ ನಾವು ಕೂಡ ನಮ್ಮ ನಿತ್ಯ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಆರೋಗ್ಯದಿಂದ ಇರಲು ಸಾಧ್ಯ. ಆರೋಗ್ಯವಿದ್ದರೆ ಇನ್ನೇನು ಬೇಕು? 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು