ಹೈದರಾಬಾದ್: ಅಂಗಾಂಗ ದಾನವನ್ನು ಸಾಮಾನ್ಯವಾಗಿ ವಯಸ್ಕರು ಮಾತ್ರ ಮಾಡುತ್ತಾರೆ. ಆದರೆ ವಿರಳ ಪ್ರಕರಣವೊಂದರಲ್ಲಿ ಮೆದುಳು ನಿಷ್ಕ್ರಿಯಗೊಂಡ 14 ತಿಂಗಳಬಾಲಕನ ಮೂತ್ರಪಿಂಡವನ್ನು ಹೈದರಾಬಾದ್ನಲ್ಲಿ 58 ವರ್ಷದ ಮಹಿಳೆಗೆ ದಾನ ಮಾಡಲಾಗಿದೆ.
ಕಳೆದ ಏಳು ವರ್ಷಗಳಿಂದ ಡಯಾಲಿಸಿಸ್ಗೆ ಒಳಗಾದ ಮಹಿಳೆಗೆ ಬಾಲಕ ತೀರಿಕೊಂಡ ದುಃಖವನ್ನು ಮೀರಿ, ಮಗುವಿನ ಪೋಷಕರು ಮೂತ್ರಪಿಂಡವನ್ನು ದಾನ ಮಾಡಿದರು. 58ರ ಹರೆಯದ ಮಹಿಳೆ ಹೃದಯ ಸಮಸ್ಯೆಯನ್ನು ಹೊಂದಿದ್ದು ಪೇಸ್ಮೇಕರ್ ಕೂಡ ಅಳವಡಿಸಲಾಗಿತ್ತು. ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಚಿಕ್ಕ ಮಕ್ಕಳ ಅಂಗಗಳು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ, ವಯಸ್ಸಾದ ಜನರಲ್ಲಿ ಅವುಗಳನ್ನು ಅಳವಡಿಸಲು ತೊಡಕುಗಳಿವೆ. ಆದಾಗ್ಯೂ, ನುರಿತ ವೈದ್ಯರು, ಅತ್ಯಾಧುನಿಕ ತಂತ್ರಜ್ಞಾನದಿಂದ ಈ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ವೈದ್ಯರ ತಂಡ ವಿವರಿಸಿದೆ.
ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಿದ ತಂಡದ ನೇತೃತ್ವ ವಹಿಸಿದ್ದ ಸಮಾಲೋಚಕ ಮೂತ್ರಶಾಸ್ತ್ರಜ್ಞ ಮತ್ತು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ.ಉಮಾಮಹೇಶ್ವರ ರಾವ್ ಮಾತನಾಡಿ ಇದು ಅತಿ ವಿರಳ, ಕ್ಲಿಷ್ಟಕರ ಸಮಸ್ಯೆಯಾಗಿತ್ತು ಎಂದು ವಿವರಿಸಿದ್ದಾರೆ.
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.