News Karnataka Kannada
Saturday, May 04 2024
ಮೈಸೂರು

ಆರೋಗ್ಯ ಚೆನ್ನಾಗಿದ್ದರೆ ಸಾಧನೆ ಸಾಧ್ಯ: ಡಾ.ಲೋಹಿತ್

Achievement is possible if health is good: Dr Lohith
Photo Credit : By Author

ಮೈಸೂರು: ಮನುಷ್ಯನ ಆರೋಗ್ಯ ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿದ್ದರೆ, ಗುರಿಯಿಟ್ಟುಕೊಂಡು ಸಾಧನೆ ಮಾಡಿದರೆ ಯಾವುದೇ ಕೆಲಸವನ್ನು ಯಶಸ್ವಿಯಾಗಿ ಸಾಧಿಸಬಹುದು ಎಂದು ಡಾ. ಲೋಹಿತ್ ತಿಳಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ಸಿದ್ದರಾಮಯ್ಯ ಬಾಲಕಿಯರ ವಸತಿ ನಿಲಯದಲ್ಲಿ ಹುಣಸೂರಿನ ಕಾವೇರಿ ಆಸ್ಪತ್ರೆಯ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಹಿಂದುಳಿದ ವರ್ಗದ ಹೆಣ್ಣು ಮಕ್ಕಳು ಮೈಸೂರಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿರುವುದೇ ಸಂತೋಷದ ವಿಷಯವಾಗಿದೆ.

ಸಿದ್ದರಾಮಯ್ಯನವರು ಹಿಂದುಳಿದ ವರ್ಗದ ಹೆಣ್ಣುಮಕ್ಕಳು ಸಹ ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಈ ವಿದ್ಯಾರ್ಥಿನಿಲಯವನ್ನು ಕಟ್ಟಿಸಿದ್ದಾರೆ. ಅವರ ಕನಸು ನನಸಾಗಬೇಕಾದರೆ ನೀವೆಲ್ಲರೂ ಚೆನ್ನಾಗಿ ಓದಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿ ಆರ್ಥಿಕವಾಗಿ ಸಬಲರಾಗುವುದರ ಜೊತೆಗೆ ಸಮಾಜದಲ್ಲಿ ಬದಲಾವಣೆ ತರಬೇಕು. ಆ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಿ ಈ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದ ಅವರು, ಮನುಷ್ಯನ ಬದಲಾದಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗಿ ಕಾಯಿಲೆಗಳು ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ ಆದ್ದರಿಂದ ಪ್ರತಿಯೊಬ್ಬರು ಕಾಯಿಲೆಗಳು ಬಂದ ಮೇಲೆ ಆಸ್ಪತ್ರೆಗಳಿಗೆ ಬಂದು ಲಕ್ಷಾಂತರ ರೂ. ಖರ್ಚು ಮಾಡುವ ಬದಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಂಡು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕಾಗಿನೆಲೆ ವಿದ್ಯಾಸಂಸ್ಥೆಯಗೌರವ ಕಾರ್ಯದರ್ಶಿ ಪುಟ್ಟಬಸವೇಗೌಡ, ನಿಲಯಪಾಲಕಿ ಸೌಮ್ಯ, ಮಂಜುನಾಥ್, ಗಣೇಶ್, ಶುಶ್ರೂಷಕಿ ಅಸ್ಪೋನ್ಸ್ ಡಯಾನ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು