Categories: ಆರೋಗ್ಯ

ಬೇಸಿಗೆಯಲ್ಲಿ ಸೊಳ್ಳೆಗಳು ಕಾಯಿಲೆ ತರಬಹುದು ಹುಷಾರ್!

ಬೇಸಿಗೆ ಕಾಲದಲ್ಲಿ ಬಿಸಿಲಿಗೆ ಒಗ್ಗಿಕೊಂಡು ದಿನ ಕಳೆಯುವುದೇ ಕಷ್ಟವಾಗಿರುವಾಗ ಕೊಳಚೆ ನೀರುಗಳು ನಿಲ್ಲುವ ಸ್ಥಳಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅವುಗಳ ಹಾವಳಿಯೂ ಜಾಸ್ತಿಯಾಗಿದೆ. ಹೀಗಾಗಿ ಈ ಸೊಳ್ಳೆಗಳ ಬಗ್ಗೆ ನಿರ್ಲಕ್ಷ್ಯವಹಿಸದೆ ಅವುಗಳ ಬಗ್ಗೆ ಎಚ್ಚರ ವಹಿಸಬೇಕಾಗಿದೆ. ಏಕೆಂದರೆ ಇವು ಬೇಸಿಗೆಯಲ್ಲಿ ಮಲೇರಿಯಾವನ್ನು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಬೇಸಿಗೆ ಕಾಲದಲ್ಲಿ ಸೊಳ್ಳೆಗಳು ಒಂದಲ್ಲ ಒಂದು ರೀತಿಯ ಸೋಂಕುಗಳನ್ನು ಹರಡುತ್ತಲೇ ಬಂದಿವೆ. ಅದರಲ್ಲೂ ಈ ಹಿಂದೆ ಮಲೇರಿಯಾ ರೋಗವಂತು ಎಲ್ಲರನ್ನು ಬಿಟ್ಟು ಬಿಡದೆ ಕಾಡುತ್ತಿತ್ತು. ಈಗಲೂ ಅದು ಕಾಡಬಹುದು ಅದಕ್ಕೆ ಸೊಳ್ಳೆ ಸಹಕಾರಿಯಾಗಿದೆ. ಸೊಳ್ಳೆಯಿಂದ ಹರಡುವ ರೋಗದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪ್ರಚಾರ ಮಾಡಿದರೂ ಕೂಡ ಕೆಲವೊಮ್ಮೆ ಗೊತ್ತೇ ಆಗದಂತೆ ಅಟಕಾಯಿಸಿಬಿಡುತ್ತದೆ.

ಮಲೇರಿಯಾದ ಬಗ್ಗೆ ಹೇಳುವುದಾದರೆ ಇದರಲ್ಲಿ ನಾಲ್ಕು ಪ್ರಬೇಧಗಳಿದ್ದು, ಶೀಘ್ರ ಪತ್ತೆ, ತ್ವರಿತ ಚಿಕಿತ್ಸೆ ಎಂಬಂತೆ ರೋಗಕ್ಕೆ ಚಿಕಿತ್ಸೆಯೂ ಲಭ್ಯವಿದ್ದು, ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗೆಂದು ಮಲೇರಿಯಾ ರೋಗದ ನಿರ್ಲಕ್ಷ್ಯವೂ ಸಲ್ಲದು. ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಜೀವಿಯಿಂದ ಉಂಟಾಗುವ ಮಲೇರಿಯಾ ರೋಗವು ಅನಾಫಿಲೀಸ್ ಜಾತಿಗೆ ಸೇರಿದ ಸೋಂಕಿತ ಹೆಣ್ಣು ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ.

ಬೇಸಿಗೆ ದಿನಗಳಲ್ಲಿ ಅನಾಫಿಲೀಸ್ ಜಾತಿಯ ಸೊಳ್ಳೆಗಳು ನೀರಿನ ತಾಣಗಳಾದ ಕೆರೆಗಳು, ಬಾವಿಗಳು, ಕಾಲುವೆ, ಹೊಂಡ, ಇತರೆ ಅನುಪಯುಕ್ತ ಘನತ್ಯಾಜ್ಯ ವಸ್ತುಗಳನ್ನು ಆಶ್ರಯ ತಾಣ ಮಾಡಿಕೊಂಡು ಅಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಮುಂದೆ ಮನುಷ್ಯನಿಗೆ ಕಚ್ಚುತ್ತಾ ತನ್ನೊಂದಿಗೆ ಮಲೇರಿಯಾ ರೋಗವನ್ನು ಹರಡುತ್ತಾ ಹೋಗುತ್ತವೆ.

ಮಲೇರಿಯಾ ರೋಗವನ್ನು ತಡೆಗಟ್ಟಲು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು. ಮನೆಗಳ ಕಿಟಕಿ ಬಾಗಿಲುಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸಿಕೊಳ್ಳಬೇಕು. ಮಲಗುವ ವೇಳೆ ಸೊಳ್ಳೆ ಪರದೆ ಕಟ್ಟಿಕೊಳ್ಳಬೇಕು. ಮನೆಯ ಸುತ್ತಮುತ್ತಲ ಪ್ರದೇಶವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಮಲೇರಿಯಾ ಜ್ವರ ಹೆಚ್ಚು ಪ್ರಕರಣಗಳಿರುವ ಸ್ಥಳಗಳಿಗೆ ಹೋಗಿಬಂದಾಗ ಮಲೇರಿಯಾ ರಕ್ತ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು.

ಬೇಸಿಗೆ ಕಾಲವಾಗಿರುವುದರಿಂದ ಶುಚಿತ್ವ ಇಲ್ಲದ ಕಡೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಅವು ಮಲೇರಿಯಾದಂತಹ ಕಾಯಿಲೆಯನ್ನು ತರುವ ಕಾರಣ ಅಂತಹ ಪ್ರದೇಶಗಳನ್ನು ಗುರುತಿಸಿ ಸೊಳ್ಳೆಗಳ ನಿರ್ಮೂಲನೆಗೆ ಮುಂದಾಗಬೇಕು. ಬೇಸಿಗೆ ನೆಮ್ಮದಿಯಾಗಿ ಇರುವ ಕಾಲವಂತು ಅಲ್ಲವೇ ಅಲ್ಲ. ಕೆಲಸ, ಓಡಾಟಗಳ ನಡುವೆಯೂ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಒಂದಷ್ಟು ಮುಂಜಾಗ್ರತೆ ವಹಿಸುವುದು ಬಲು ಅಗತ್ಯವಾಗಿದೆ.

Gayathri SG

Recent Posts

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

1 min ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

14 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

20 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

24 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

38 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

44 mins ago