Categories: ಆರೋಗ್ಯ

ಬೇಸಿಗೆಯಲ್ಲಿ ನೀರಿನಿಂದ ಕಾಮಾಲೆ ಬರಬಹುದು ಎಚ್ಚರ

ಈ ಬಾರಿಯ ಬೇಸಿಗೆ ಕಠಿಣವಾಗಿರಲಿದೆ ಕಾರಣ ಬರದಿಂದ ಕುಡಿಯುವ ನೀರಿಗೂ ತಾತ್ವಾರವುಂಟಾಗಿದ್ದು, ಹೀಗಾಗಿ ನೀರು ಸೇವಿಸುವ ಮುನ್ನ ಎಚ್ಚರವಾಗಿರುವುದು ಬಹುಮುಖ್ಯವಾಗಿದೆ. ಬರದಿಂದಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಆದಷ್ಟು ನೀರನ್ನು ಕುದಿಸಿ ಆರಿಸಿ ಕುಡಿಯುವುದು ಅಗತ್ಯವಾಗಿದೆ.

ಬೇಸಿಗೆಯಲ್ಲಿ ಕಲುಷಿತ ನೀರಿನಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ  ವಹಿಸಬೇಕಾಗಿದೆ.  ಬಹಳಷ್ಟು ಜನಕ್ಕೆ ಕಾಮಾಲೆ ರೋಗದ ಚಿಹ್ನೆಗಳು ಗೊತ್ತಾಗುವುದಿಲ್ಲ ಹೀಗಾಗಿ ಅವರು ಯಾವುದೋ ಒಂದು ಮಾತ್ರೆ ಸೇವಿಸಿ ತೆಪ್ಪಗಾಗುತ್ತಾರೆ. ಉಲ್ಭಣಗೊಂಡಾಗ ಆಸ್ಪತ್ರೆಗೆ ತೆರಳುತ್ತಾರೆ. ಆದ್ದರಿಂದ ಮೊದಲಿಗೆ ರೋಗದ ಲಕ್ಷಣಗಳನ್ನು ತಿಳಿದುಕೊಂಡರೆ ಬಹುಬೇಗ ಚಿಕಿತ್ಸೆ ಪಡೆದು ವಾಸಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ಜ್ವರ, ಚಳಿ, ತಲೆನೋವು, ಆಯಾಸ, ದೇಹ ಪೂರ್ಣ ನಿಶ್ಯಕ್ತಿ, ಕೀಲು ನೋವು ಇದರ ಜೊತೆಗೆ ವಾಕರಿಕೆ, ವಾಂತಿ, ಹಸಿವು  ಇಲ್ಲದಿರುವುದು, ಹಳದಿ ಬಣ್ಣದ ಮೂತ್ರ ಹೋಗುವುದು. ಕಣ್ಣು, ಚರ್ಮ, ಉಗುರುಗಳು ಹಳದಿಯಾಗಿರುವುದು ಕಂಡು ಬರುತ್ತದೆ. ಇದಿಷ್ಟನ್ನು ಗಮನಿಸಿದರೆ ಅದು  ಕಾಮಾಲೆ ರೋಗ ಎಂಬುದು ಮನದಟ್ಟಾಗಿ ಬಿಡುತ್ತದೆ.

ವೈದ್ಯರ ಪ್ರಕಾರ ಯಕೃತಿನ (ಲಿವರ್) ಸೋಂಕಿನಿಂದ  ಕಾಮಾಲೆ  ಬರುತ್ತದೆಯಂತೆ. ರೋಗದ ಸೋಂಕಿಗೆ ಹಲವಾರು ವೈರಾಣುಗಳು ಕಾರಣವಾಗಿದ್ದು, ಆ ಪೈಕಿ ಸೌಮ್ಯ ಸ್ವರೂಪದ ಎ ವೈರಾಣುವಿನಿಂದ ಹಿಡಿದು ತೀವ್ರ ಸ್ವರೂಪದ ಬಿ ವೈರಾಣು ಹಾಗೂ ಸಿ, ಡಿ, ಇ ಮತ್ತು ಜಿ ವೈರಾಣುವಿನಿಂದ ರೋಗಕ್ಕೆ ತುತ್ತಾಗಬಹುದು. ಕಾಮಾಲೆ ರೋಗವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಜನಸಾಂದ್ರತೆ ಜಾಸ್ತಿ ಇರುವಲ್ಲಿ ಮತ್ತು ವೈಯಕ್ತಿಕ ಹಾಗೂ ಪರಿಸರ ನೈರ್ಮಲ್ಯ ಕೊರತೆ ಇರುವ ಕಡೆ ಸಾಂಕ್ರಾಮಿಕ ರೋಗವಾಗಿ ಕಾಣಿಸಿಕೊಳ್ಳುತ್ತಿರುವುದು ಇತ್ತೀಚಿಗಿನ ದಿನಗಳಲ್ಲಿ ಕಂಡು ಬರುತ್ತಿದೆ.

ಈ ರೋಗ ಹರಡಲು  ವಯಸ್ಸಿನ ಮತ್ತು ಲಿಂಗ ತಾರತಮ್ಯವಿಲ್ಲ. ಆದರೆ ಹೆಚ್ಚಾಗಿ ಮಕ್ಕಳು ಹಾಗೂ ವಯಸ್ಕರಲ್ಲಿ ಕಂಡು  ಬರುತ್ತದೆ. ಈ ರೋಗದಿಂದ ನರಳುತ್ತಿರುವ ರೋಗಿಗಳು ಕಾಮಾಲೆ ರೋಗ ಲಕ್ಷಣಗಳು ಕಂಡುಬರುವ ಎರಡು ವಾರ ಮೊದಲು, ಕಂಡು ಬಂದ ಒಂದು ವಾರದವರೆಗೂ ರೋಗಾಣುವನ್ನು ಮಲದ ಮೂಲಕ ಹೊರಹಾಕುತ್ತಾರೆ. ಇಂತಹ ರೋಗಿಗಳ ಮಲವು ಕುಡಿಯುವ ನೀರು, ತಿನ್ನುವ ಆಹಾರವನ್ನು ಕಲುಷಿತಗೊಳಿಸಿದರೆ ಇಂತಹ ಆಹಾರವನ್ನು ಸೇವಿಸಿದ ಈ ರೋಗದ ವಿರುದ್ದ ನಿರೋಧಕ ಶಕ್ತಿ ಇಲ್ಲದ ವ್ಯಕ್ತಿಗಳಿಗೆ ಸಾಮಾನ್ಯವಾಗಿ 25 ರಿಂದ 35 ದಿನಗಳ ನಂತರ ರೋಗ ಲಕ್ಷಣಗಳು ಕಂಡು ಬರಬಹುದು. ಅಪರೂಪದಲ್ಲಿ ಕೆಲವೊಮ್ಮೆ ರಕ್ತದ ಮೂಲಕವೂ ಈ ಕಾಮಾಲೆ ರೋಗವು ಹರಡಬಲ್ಲದು. ಒಮ್ಮೆ ಈ ರೋಗದಿಂದ ನರಳಿದವರು ಶೇ. 95 ರಷ್ಟು ನಿರೋಧಕ ಶಕ್ತಿಯನ್ನು ಪಡೆಯುತ್ತಾರೆ. ಶೇ. 5 ರಷ್ಟು ಜನರು ಪುನಃ ಈ ರೋಗಕ್ಕೆ ತುತ್ತಾಗಬಹುದು.

ಕಾಮಾಲೆ ರೋಗಕ್ಕೆ ತುತ್ತಾದ ರೋಗಿಗಳು ತಜ್ಞ ವೈದ್ಯರಿಂದ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದು ವೈದ್ಯರ ಸಲಹೆ  ಸೂಚನೆಯನ್ನು ಪಾಲಿಸುವುದು ಅಗತ್ಯ. ರೋಗಿಗಳನ್ನು ಪ್ರತ್ಯೇಕವಾಗಿಸುವುದು ಹಾಗೂ ಉಪಯೋಗಿಸುವ ಪಾತ್ರೆ ಬಟ್ಟೆ ಬರೆಗಳನ್ನು ಕ್ರಿಮಿ ನಾಶಕದಿಂದ ಶುದ್ದೀಕರಿಸುವುದು, ಮಲ ಮೂತ್ರವನ್ನು ಕ್ರಿಮಿನಾಶಕ ಹಾಕಿ ವಿಲೇವಾರಿ ಮಾಡುವುದು. ಸುರಕ್ಷಿತ ನೀರಿನ ಸರಬರಾಜು, ಆಹಾರ ಮತ್ತು ಪ್ರತಿಯೊಬ್ಬರೂ ಶೌಚಾಲಯ ವ್ಯವಸ್ಥೆ ಬಳಸುವುದು ಅಗತ್ಯ.

ವೈಯಕ್ತಿಕ ನೈರ್ಮಲ್ಯ ಪಾಲನೆ, ಮಲ ಮೂತ್ರ ವಿಸರ್ಜನೆಗೆ ಹೋಗಿ ಬಂದಾಗ ಸಾಬೂನಿನಿಂದ ಕೈಕಾಲು  ತೊಳೆಯುವುದು, ಆಹಾರ ಪಾನೀಯ ಸ್ವೀಕರಿಸುವ ಮೊದಲು ಕೈಕಾಲು ಮುಖ ತೊಳೆಯುವುದನ್ನು ಮಾಡಬೇಕು. ಶುದ್ದೀಕರಿಸಿದ ಸಿರೆಂಜ್ ಸೂಜಿ ಬಳಸುವುದು. ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ ಪಾಲನೆ. ಮನೆಗಳಲ್ಲಿ, ಊಟ ಉಪಹಾರ ಮಂದಿರಗಳಲ್ಲಿ ಚೆನ್ನಾಗಿ ಕುದಿಸಿ ಆರಿಸಿದ ನೀರನ್ನೇ ಉಪಯೋಗಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ತೆರೆದಿಟ್ಟ ಪಾನೀಯ ಹಾಗೂ ಹಣ್ಣು ಹಂಪಲು, ತರಕಾರಿಗಳನ್ನು ಉಪಯೋಗಿಸಬಾರದು. ಕೊಳೆತ ಆಹಾರ, ಮೀನು, ಮಾಂಸ, ಐಸ್‌ಕ್ರೀಂ, ಶೀತಲೀಕರಿಸಿದ ಆಹಾರ ಇತ್ಯಾದಿಗಳನ್ನು ಉಪಯೋಗಿಸಬಾರದು. ಸಾರ್ವಜನಿಕ ನೀರು ಸರಬರಾಜು ವ್ಯವಸ್ಥೆಯಲ್ಲಿ ಸೂಪರ್ ಕ್ಲೋರಿನೇಶನ್ ಮಾಡುವುದು ಅಗತ್ಯವಾಗಿದೆ.

Ashika S

Recent Posts

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

8 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

14 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

17 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

32 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

38 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

1 hour ago