ಆರೋಗ್ಯ

ಹಣ್ಣುಗಳನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ

ಈಗ ಬೆಳಿಗ್ಗೆ ಚಳಿ ಇದ್ದರೆ ಮಧ್ಯಾಹ್ನದ ವೇಳೆಗೆ ಸೆಕೆ ಕಾಣಿಸಿಕೊಂಡು ಮೈಯೆಲ್ಲ ಉರಿಯುವಂತೆ ಮಾಡಿ ಬಿಡುತ್ತದೆ. ಜತೆಗೆ ದೇಹದಲ್ಲಿ ಉಷ್ಣಾಂಶ ಕಾಣಿಸಿಕೊಳ್ಳುವುದರಿಂದ ಸಮತೋಲನ ಕಾಪಾಡಿಕೊಳ್ಳುವುದು ಸವಾಲ್ ಆಗಿದೆ.

ಈಗಿನ ಪರಿಸ್ಥಿತಿಯಲ್ಲಿ ನಮ್ಮ ಆರೋಗ್ಯದ ದೃಷ್ಠಿಯಿಂದ ಹೆಚ್ಚು ಹೆಚ್ಚಾಗಿ ಹಣ್ಣು-ತರಕಾರಿ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಇವು ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗುತ್ತವೆ. ಇದರಲ್ಲಿರುವ ಲವಣಗಳು, ವಿಟಮಿನ್‌ಗಳಂತಹ ಪೌಷ್ಠಿಕ ಪದಾರ್ಥಗಳು ಶರೀರಕ್ಕೆ ಪೋಷಕ ಶಕ್ತಿಯನ್ನು ನೀಡುತ್ತವೆ. ನಮ್ಮ ಆಹಾರದೊಂದಿಗೆ ಕನಿಷ್ಠ ಒಂದು ರೀತಿಯ ಹಣ್ಣನ್ನಾದರೂ ಸೇವಿಸುವುದು ಒಳ್ಳೆಯದು.

ಕೆಲವು ಹಣ್ಣುಗಳನ್ನು ನಿಯಮಬದ್ಧವಾಗಿ ಸೇವಿಸುತ್ತಾ ಬಂದರೆ ಮಧುಮೇಹ, ಬೊಜ್ಜು, ಎದೆನೋವು ಮತ್ತಿತರ ಕಾಯಿಲೆಗಳು ದೂರವಾಗುವುವು. ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಹೆಚ್ಚಿನ ಬೇಡಿಕೆ ಕಂಡು ಬರುತ್ತದೆ. ಏಕೆಂದರೆ ಈ ಹಣ್ಣು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿ ಹೇರಳವಾದ ಲವಣಗಳು ಹಾಗೂ ವಿಟಮಿನ್‌ಗಳಿವೆ. ಅಷ್ಟೇ ಅಲ್ಲ ದ್ರವ ಪದಾರ್ಥವೂ ಇದೆ. ಬಾಳೆಹಣ್ಣಿನಲ್ಲಿರುವ ವಿಟಮಿನ್‌ಗಳು ಜೀರ್ಣಕ್ರಿಯೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ.

ಆರೋಗ್ಯವನ್ನು ವೃದ್ಧಿಸುವ ಪೌಷ್ಠಿಕಾಂಶಗಳು ಹಣ್ಣು, ತರಕಾರಿಯಲ್ಲಿವೆ. ಇವು ಶರೀರದೊಳಗೆ ಸೇರಿರುವ ವಿಷಪದಾರ್ಥಗಳನ್ನು ಹೊರ ಹಾಕುತ್ತವೆ. ತಾಜಾ ಸೊಪ್ಪು, ಹಸಿಬಟಾಣಿ, ಆಲೂಗೆಡ್ಡೆ, ಟೊಮೇಟೋದೊಂದಿಗೆ ಕೂಡಿದ ಸಲಾಡ್ ಶರೀರಕ್ಕೆ ಆರೋಗ್ಯ ನೀಡುತ್ತದೆ. ಆಗಾಗ್ಗೆ ಸೌತೆಕಾಯಿ ತಿನ್ನುವುದು ಕೂಡ ಒಂದು ಒಳ್ಳೆಯ ಅಭ್ಯಾಸವೇ ಆಯಾಯ ಕಾಲಕ್ಕೆ ತಕ್ಕಂತೆ ನಾವು ಕೂಡ ನಮ್ಮ ನಿತ್ಯ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ಬೇಸಿಗೆಯ ದಿನಗಳು ಆಗಿರುವುದರಿಂದ ಸೂರ್ಯನ ಪ್ರಖರತೆ ಹೆಚ್ಚಾಗಿ ಸ್ವಲ್ಪ ದೂರ ಕ್ರಮಿಸಿದರೆ, ಕೆಲಸ ಮಾಡಿದರೆ ಬಾಯಾರಿಕೆ, ಸುಸ್ತು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ ಹಣ್ಣು ಮತ್ತು ಹಣ್ಣಿನಿಂದ ಮಾಡಿದ ಜ್ಯೂಸ್ ಗಳನ್ನು ಸೇವಿಸುವುದು, ಹಸಿ ತರಕಾರಿಗಳನ್ನು ಉಪಯೋಗಿಸಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

Gayathri SG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

41 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

48 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

58 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago