Categories: ಆರೋಗ್ಯ

ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ ಎಷ್ಟೆಲ್ಲಾ ಆರೋಗ್ಯ ಲಾಭಗಳಿವೆ ಗೊತ್ತಾ ?

ಬಾಳೆ ಎಲೆಯಲ್ಲಿ ತಿನ್ನಬಹುದಾದ ಮೇಣವು ಇದ್ದು, ಇದರಿಂದಾಗಿ ಅದರಲ್ಲಿ ಊಟ ಮಾಡಿದರೆ ಆಗ ಆಹಾರದ ಸುವಾಸನೆ ಮತ್ತು ರುಚಿಯು ಹೆಚ್ಚಾಗುವುದು. ಬಿಸಿ ಬಿಸಿಯಾಗಿರುವ ಆಹಾರವನ್ನು ಬಾಳೆ ಎಲೆ ಮೇಲೆ ಹಾಕಿದ ವೇಳೆ ಅದು ಆಹಾರಕ್ಕೆ ರುಚಿ ಹಾಗೂ ಸುವಾಸನೆ ನೀಡುವುದು.

ಬಾಳೆ ಎಲೆಯಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಫೆನಾಲ್ ಗಳಿದ್ದು, ಇದು ನೈಸರ್ಗಿಕ ಆಂಟಿಆಕ್ಸಿಡೆಂಟ್ ಆಗಿದೆ ಮತ್ತು ಫ್ರೀ ರ್ಯಾಡಿಕಲ್ ವಿರುದ್ಧ ಹೋರಾಡಿ, ಕ್ಯಾನ್ಸರ್ ತಡೆಯುವುದು. ಬಾಳೆ ಎಲೆಯಲ್ಲಿ ಸೇವಿಸುವಂತಹ ಆಹಾರವು ಪೋಷಕಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ನ್ನು ಹೀರಿಕೊಂಡು ದೇಹಕ್ಕೆ ನೀಡುವುದು. ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳು ಇವೆ. ಇದು ಕೀಟಾಣುಗಳನ್ನು ದೂರ ಮಾಡುವುದು.

ಬಾಳೆ ಎಲೆಯಲ್ಲಿ ಊಟ ಬಡಿಸುವುದು ತುಂಬಾ ಸುಲಭ. ಇದನ್ನು ಒಮ್ಮೆ ನೀರಿನಲ್ಲಿ ಒರೆಸಿಕೊಂಡು ಬಳಸಬಹುದು.
ಬಾಳೆ ಎಲೆಯಲ್ಲಿನ ಊಟವು ತುಂಬಾ ಆರೋಗ್ಯಕಾರಿ, ಶುಚಿ ಹಾಗೂ ಫೋಷಕಾಂಶಗಳನ್ನು ದೇಹಕ್ಕೆ ನೀಡುವುದು. ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ ಮಿಶ್ರಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಗುಳ್ಳೆಗಳು ಮಾಯವಾಗುತ್ತವೆ.

‘ಜರ್ನಲ್ ಆಫ್ ಎಥ್ನಿಕ್ ಫುಡ್ಸ್’ ನಲ್ಲಿ ಪ್ರಕಟವಾದ ಒಂದು ಅಧ್ಯಯನವು ಬಾಳೆ ಎಲೆಗಳ ಬಳಕೆಯು ಲೋಹದ ಪಾತ್ರೆಗಳು ಅಸ್ತಿತ್ವಕ್ಕೆ ಬರುವ ಮುಂಚಿನ ಯುಗಕ್ಕೆ ಸೇರಿದ್ದು ಎಂದು ತಿಳಿಸಿದೆ. ನಾವು ನಮ್ಮ ನಿಯಮಿತ ಪಾತ್ರೆಗಳನ್ನು ತೊಳೆದಾಗ, ಸಾಬೂನು ಕ್ಲೀನರ್ ಗಳಿಂದ ರಾಸಾಯನಿಕ ಉಳಿಕೆಯ ಅಪಾಯವಿರುತ್ತದೆ. ಆದರೆ ಬಾಳೆ ಎಲೆಗಳನ್ನು ಸ್ವಾಭಾವಿಕವಾಗಿ ಮೇಣದಂತಹ ವಸ್ತುವಿನಿಂದ ಲೇಪಿಸಲಾಗುತ್ತದೆ, ಇದು ಆಹಾರವು ಅದರ ಮೇಲ್ಮೈಗೆ ಅಂಟಿಕೊಳ್ಳುವುದನ್ನು ತಡೆಯುತ್ತದೆ. ಆದ್ದರಿಂದ, ಎಲೆಗಳನ್ನು ತೊಳೆಯುವುದು ಸುಲಭ ಮತ್ತು ಮರುಬಳಕೆಗೆ ಇದು ಹೆಚ್ಚು ಆರೋಗ್ಯಕರವಾಗಿದೆ.

 

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago