ಮೈಸೂರು: ತಂಬಾಕಿನಲ್ಲಿ 300ಕ್ಕೂ ಹೆಚ್ಚು ವಿಷಕಾರಿ ಅಂಶಗಳಿದ್ದು, ತಂಬಾಕು ಸೇವನೆಯ ಪರಿಣಾಮ ನೇರವಾಗಿ ದೇಹದ ಪ್ರತಿಯೊಂದು ಪ್ರಮುಖ ಅಂಗದ ಮೇಲೆ ಪರಿಣಾಮವನ್ನು ಬೀರುತ್ತದೆ ಎಂದು ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಂಜುನಾಥ್ ತಿಳಿಸಿದ್ದಾರೆ.
ಒಂಟಿಕೊಪ್ಪಲಿನಲ್ಲಿರುವ ಡಿ ಆರ್ ಎಂ ಆಸ್ಪತ್ರೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿ ಬಾಯಿ ಕ್ಯಾನ್ಸರ್ ನ್ನು ಮೊದಲ ಹಂತದಲ್ಲಿ ಪತ್ತೆ ಹಚ್ಚಿದಲ್ಲಿ ಶೇ.90 ಗುಣಪಡಿಸಬಹುದು. ನಾಲ್ಕನೇ ಹಂತದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿದಲ್ಲಿ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಬಾಯಿ ಕ್ಯಾನ್ಸರ್ ಗೆ ಸರ್ಜರಿ, ರೇಡಿಯೇಶನ್, ಕಿಮೋಥೇರಪಿ ಚಿಕಿತ್ಸೆಗಳಿದ್ದು, ಸರ್ಜರಿ ಮೂಲಕ ಸಂಪೂರ್ಣವಾಗಿ ಗುಣಪಡಿಸಬಹುದು ಎಂದರು.
ತಂಬಾಕು ಸೇವನೆ ಬಹುದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಹೆಚ್ಚಾಗಿ ಬಲಿಯಾಗುತ್ತಿರುವವರು 15ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇದು ಬಹಳ ಅಪಾಯಕಾರಿ. ಮೋಜು, ಮಸ್ತಿಗಾಗಿ ಪ್ರಾರಂಭವಾಗಿ ಅದೊಂದು ಚಟವಾಗಿ ಪರಿವರ್ತನೆಯಾಗುತ್ತದೆ. ತಂಬಾಕು ಸೇವನೆಗೆ ಇತ್ತೀಚಿಗೆ ಯುವಜನತೆ ಹೆಚ್ಚಾಗಿ ಬಲಿಯಾಗುತ್ತಿದ್ದು ತಂಬಾಕು ಸುಲಭವಾಗಿ ಸಿಗದಂತೆ ಮಾಡಬೇಕು ಎಂದರು.
ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಿ ಟಿ ಪ್ರಕಾಶ್ ಮಾತನಾಡಿ, ತಂಬಾಕು ರಹಿತ ದಿನಾಚರಣೆಯು ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ಪ್ರತಿ ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವನೆ ಮಾಡುವುದು ಕಂಡುಬಂದಲ್ಲಿ ತಂಬಾಕು ಸೇವನೆ ಮಾಡಿದವರಿಗೆ ಮಾತ್ರವಲ್ಲದೆ ಅವರ ಸಮೀಪವಿರುವರಿಗೂ ಕಾಯಿಲೆ ಬರುವ ಸಾಧ್ಯತೆ ಇರುವುದರಿಂದ ನಮಗೆ ಏಕೆ ಎಂದು ಸುಮ್ಮನಿರದೆ ಖಂಡಿಸಬೇಕು ಎಂದು ಹೇಳಿದರು.
ಇದೇ ವೇಳೆ 50 ಮಂದಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು
ಡಿ ಆರ್ ಎಂ ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಮಂಜುನಾಥ್, ಡಿ ಟಿ ಪ್ರಕಾಶ್, ಘಟಕ ಮುಖ್ಯಸ್ಥರಾದ ಚಿದು, ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ, ರಶ್ಮಿ, ಜನರಲ್ ಮ್ಯಾನೇಜರ್ ಲೋಕೇಶ್, ಅಕೌಂಟ್ ಮ್ಯಾನೇಜರ್ ಸಂಜಯ್, ಆಸ್ಪತ್ರೆಯ ಸಿಬ್ಬಂದಿಗಳಾದ ಜಬ್ಬಿ, ಲಾವಣ್ಯ, ರೂಪ ,ನಂದಿನಿ,ತೆಂಜಿಲ್ ಹಾಗೂ ಸಿಬ್ಬಂದಿ ಹಾಜರಿದ್ದರು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಗ ಎಚ್.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…
ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ಬಹಳ ದೊಡ್ಡದಿದೆ' ಎಂದು ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ…
ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಅತ್ಯಗತ್ಯ. ಹೆಚ್ಚಿನ ಭಾರತೀಯ ಆಹಾರ ಉತ್ಪನ್ನಗಳಲ್ಲಿ ತೈಲವು ಪ್ರಮುಖ ಅಂಶವಾಗಿದೆ. ಹೀಗಾಗಿ ಎಷ್ಟೋ ಜನ ಬಳಸುವ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ…
ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.…
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…