News Karnataka Kannada
Monday, April 29 2024
ಆರೋಗ್ಯ

ಅತ್ತಿಹಣ್ಣಿನ ಆರೋಗ್ಯಕಾರಿ ಗುಣಗಳ ಬಗ್ಗೆ ಗೊತ್ತಾ?

ಮರದ ತುಂಬಾ ಅಂಜೂರದಂತಹ ಹಣ್ಣನ್ನು ಬಿಟ್ಟು ಗಮನಸೆಳೆಯುವ ಅತ್ತಿಹಣ್ಣನ್ನು ನೋಡದವರು ವಿರಳವೇ.. ನೋಡಿದ್ದರೂ ಅದರಲ್ಲಿರುವ ‍‍‍ಔಷಧೀಯ ಗುಣಗಳ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ ಎನ್ನಬೇಕು. ಆದರೆ ಈ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿದರೆ ಅಚ್ಚರಿಯಾಗುವುದು ಖಚಿತ.
Photo Credit : By Author

ಮರದ ತುಂಬಾ ಅಂಜೂರದಂತಹ ಹಣ್ಣನ್ನು ಬಿಟ್ಟು ಗಮನಸೆಳೆಯುವ ಅತ್ತಿಹಣ್ಣನ್ನು ನೋಡದವರು ವಿರಳವೇ.. ನೋಡಿದ್ದರೂ ಅದರಲ್ಲಿರುವ ‍‍‍ಔಷಧೀಯ ಗುಣಗಳ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ ಎನ್ನಬೇಕು. ಆದರೆ ಈ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿದರೆ ಅಚ್ಚರಿಯಾಗುವುದು ಖಚಿತ.

ಹಾಗೆನೋಡಿದರೆ ಅತ್ತಿ ಹಣ್ಣು ಮಾತ್ರವಲ್ಲ ಮರ ಕೂಡ ಆರೋಗ್ಯಕಾರಿಯೇ. ಮರದ ಸುತ್ತಲೂ ಸುತ್ತಿದರೆ ಅದರಿಂದ ಬರುವ ಆಕ್ಸಿಜನ್ ಆರೋಗ್ಯಕ್ಕೆ ಹಿತಕರ. ಹೋಮಗಳಲ್ಲಿಯೂ ಅತ್ತಿಯ ಕಟ್ಟಿಗೆ ಬಳಸಲಾಗುತ್ತದೆ. ಇದು ಹವೆಯನ್ನು ಶುದ್ಧಗೊಳಿಸಿ ಮನಸ್ಸನ್ನು ಪ್ರಪುಲಗೊಳಿಸುತ್ತದೆ. ಇಷ್ಟೇ ಅಲ್ಲದೆ, ಹಣ್ಣು, ಬೇರು, ತೊಗಟೆ ಎಲ್ಲವೂ ಒಂದೊಂದು ರೀತಿಯ ಔಷಧೀಯ ಗುಣವನ್ನು ಅತ್ತಿಯ ವೈಜ್ಞಾನಿಕ ಹೆಸರು ಫೀಕಸ್ ಗ್ಲೊಮೆರಟಾ, ಆಂಗ್ಲ ಭಾಷೆಯಲ್ಲಿ ಕ್ಲಸ್ಟರ್ ಫಿಗ್ಸ್ ಎಂದು ಕರೆಯುತ್ತಾರೆ.

ಅತ್ತಿ ಹಣ್ಣುಗಳಲ್ಲಿ ಪೋಷಕಾಂಶಗಳಿದ್ದು, ಇದು ಆರೋಗ್ಯವನ್ನು ವೃದ್ಧಿಸುತ್ತದೆ. ಹಣ್ಣನ್ನು ಬಿಡಿಸಿ ಅದರೊಳಗಿರುವ ಚಿಕ್ಕದಾದ ಬೀಜಗಳನ್ನೆಲ್ಲ ತೆಗೆದು ಬಳಿಕ ರಸಭರಿತ ಸಿಪ್ಪೆಯನ್ನು ತಿನ್ನಬಹುದಾಗಿದೆ. ಅತ್ತಿಕಾಯಿಯನ್ನು ಪಲ್ಯಮಾಡಬಹುದಾಗಿದೆ.

ಕೊರತೆಯನ್ನು ನೀಗಿಸುತ್ತಾ ಬಂದಿದೆ. ಅತ್ತಿಕಾಯಿಯನ್ನು ಮಾಗುವ ಮುನ್ನ ಪಲ್ಯ ಮಾಡಿ ತಿನ್ನುವವರೂ ಇದ್ದಾರೆ. ಆಯುರ್ವೇದಲ್ಲಿ ಪ್ರಖ್ಯಾತರಾಗಿದ್ದ ಚರಕರರೇ ಅತ್ತಿಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ಬಣ್ಣಿಸಿದ್ದು, ಹಣ್ಣಿನ ಸತ್ವವನ್ನು ಚಮಚೆಯಷ್ಟು ದಿನ ಸೇವಿಸುತ್ತಾ ಬಂದರೆ ಸಿಹಿಮೂತ್ರ ರೋಗವನ್ನು ನಿಯಂತ್ರಿಸಬಹುದಂತೆ. ಅಪಕ್ವವಾದ ಹಣ್ಣನ್ನು ಜೇನುತುಪ್ಪದೊಂದಿಗೆ ಅಥವಾ ಹಣ್ಣಿನ ರಸಕ್ಕೆ ಸಕ್ಕರೆಯನ್ನು ಬೆರೆಸಿ ಸುಮಾರು 15ದಿನಗಳ ಕಾಲ ನಿತ್ಯ ಸೇವಿಸಿದರೆ ಶೀಘ್ರ ವೀರ್ಯಸ್ಪಲನ ಕಡಿಮೆಯಾಗಿ ಮೂತ್ರ ವಿಸರ್ಜನೆ, ಶ್ವೇತಪದರ, ಗೆನೋರಿಯಾ, ಮೂಗಿನಲ್ಲಿ ರಕ್ತಸ್ರಾವ ಇತ್ಯಾದಿ ವ್ಯಾದಿಗಳು ಗುಣಮುಖವಾಗುತ್ತವೆ.

ಅತ್ತಿ ಹಣ್ಣನ್ನು ಜೇನುತುಪ್ಪ ಮತ್ತು ಸ್ವಲ್ಪ ಉಪ್ಪಿನೊಂದಿಗೆ ಸೇವಿಸುವುದರಿಂದ ಕಾಮಾಲೆ, ಪಿತ್ತಪ್ರಕೋಪ, ಬಾಯಿಹುಣ್ಣು, ಮನೋರೋಗ, ಗರ್ಭಪಾತ ಮೊದಲಾದವುಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಹಣ್ಣನ್ನು ಸೇವಿಸುವುದರಿಂದ ಗೂರಲು, ನರಗಳ ದೌರ್ಬಲ್ಯ ಕಡಿಮೆಯಾಗಿ ಉತ್ತೇಜನ ತುಂಬುತ್ತದೆ. ಅತ್ತಿಯ ಎಳಸಾದ ಎಲೆಗಳನ್ನು ಹಲ್ಲುಗಳಿಂದ ಚೆನ್ನಾಗಿ ಜಗಿಯುವುದರಿಂದ ಬಾಯಿಯೊಳಗಿನ ಹುಣ್ಣುಗಳು ಮಾಯವಾಗುತ್ತವೆ. ಅಷ್ಟೇ ಅಲ್ಲದೆ ಬಾಯಿಯ ದುರ್ಗಂಧ ತಡೆಗೂ ಸಾಧ್ಯವಾಗುತ್ತದೆ.

ಎಲೆಯ ರಸವನ್ನು ಗೋಧಿ ಹಿಟ್ಟಿನೊಂದಿಗೆ ಕಲೆಸಿ ಕುರದ ಜಾಗಕ್ಕೆ ಲೇಪಿಸುವುದರಿಂದ ಕುರ ಹಣ್ಣಾಗಿ ಒಡೆಯುತ್ತದೆ. ಆಗತಾನೆ ಕಿತ್ತ ಎಲೆಗಳನ್ನು ಅರೆದು ರಸವನ್ನು ಲೇಪಿಸುವುದರಿಂದ ವೃಣಗಳು ವಾಸಿಯಾಗುತ್ತವೆ. ಎಲೆಗಳ ಪುಡಿಯನ್ನು ಜೇನಿನೊಂದಿಗೆ ಬೆರೆಸಿ ಕುಡಿಯುವುದರಿಂದ ಪಿತ್ತವಿಕಾರವನ್ನು ತಡೆಗಟ್ಟಬಹುದು. ಎಲೆಗಳ ಮೇಲೆ ಕಂಡು ಬರುವ ಗಂಟುಗಳನ್ನು ತೆಗೆದು ಅವುಗಳನ್ನು ಹಾಲಿನಲ್ಲಿ ಹಾಕಿ ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಸಿಡುಬು ಕಲೆಗಳಿಂದಾದ ಗುಳಿ ಮಾಯವಾಗುತ್ತದೆ ಎಂಬುದಾಗಿ ಡಾ. ಅಟ್ಕಿನ್ಸನ್ ಹೇಳಿದ್ದಾರೆ.

ಅತ್ತಿ ಮರದ ತೊಗಟೆಯನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ನುಣುಪಾಗಿ ಪುಡಿಮಾಡಿ ಸುಮಾರು ಐದರಿಂದ ಹತ್ತು ಗ್ರಾಂನಷ್ಟು ಪುಡಿಯನ್ನು ಆಗತಾನೆ ಕಡೆದ ಸಿಹಿ ಮಜ್ಜಿಗೆಯೊಂದಿಗೆ ಒಂದು ಲೋಟದಷ್ಟು ಬೆರೆಸಿ ಎರಡು ತಿಂಗಳ ಕಾಲ ದಿನಕ್ಕೆ ಎರಡು ಅಥವಾ ಮೂರು ಬಾರಿ ಸೇವಿಸುವುದರಿಂದ ಅಮಶಂಕೆ, ಅತಿಸಾರ, ಮೂಲವ್ಯಾಧಿ ರೋಗಗಳು ಗುಣಮುಖವಾಗುತ್ತವೆ.

ಹತ್ತುಗ್ರಾಂ ಅತ್ತಿ ತೊಗಟೆಯ ಪುಡಿಗೆ ಅರ್ಧ ಔನ್ಸ್‌ನಷ್ಟು ಹಾಗಲಕಾಯಿ ರಸವನ್ನು ಸೇರಿಸಿ ಕುಡಿಯುವುದರಿಂದ ಸಿಹಿ ಮೂತ್ರ ರೋಗವನ್ನು ತಡೆಯಲು ಸಾಧ್ಯವಿದೆ. ಬೇರನ್ನು ಚೆನ್ನಾಗಿ ಕುಟ್ಟಿ ರಸ ತೆಗೆದು ಅದಕ್ಕೆ ಜೀರಿಗೆ ಬೆರೆಸಿ ಎಳನೀರಿನೊಂದಿಗೆ ಮುಂಜಾನೆ ಗೆನೋರಿಯಾ ಕಾಯಿಲೆಯನ್ನು ತಡೆಗಟ್ಟಬಹುದಂತೆ. ಬೇರಿನ ರಸವನ್ನು ತೆಗೆದು ದಿನಕ್ಕೆ ಒಂದೆರಡು ಚಮಚದಷ್ಟು ಸೇವಿಸುತ್ತಾ ಬಂದರೆ ಆರೋಗ್ಯ ವೃದ್ಧಿಯಾಗುತ್ತದೆಯಂತೆ.

ಒಟ್ಟಾರೆಯಾಗಿ ಹೇಳಬೇಕೆಂದರೆ ಮಾರುಕಟ್ಟೆ ಮಾನ್ಯತೆ ಪಡೆಯದೆ, ಕಾಡಿನಲ್ಲಿ ತೋಟಗಳಲ್ಲಿ ಹುಟ್ಟಿ ಬೆಳೆಯುವ ಮರ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉತ್ತಮವಾಗಿದ್ದರೂ ಜನ ಅದರತ್ತ ಆಕರ್ಷಣೆಯಾದಂತೆ ಕಾಣುತ್ತಿಲ್ಲ. ಇದರ ಉಪಯೋಗವನ್ನು ಪಡೆಯುತ್ತಿಲ್ಲವೆಂದೇ ಹೇಳಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು