Categories: ಆರೋಗ್ಯ

ಕಲ್ಲಂಗಡಿ ಬೀಜದ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತಾ?

ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಇದು ಹೈಡ್ರೇಟಿಂಗ್ ಹಣ್ಣಾಗಿದ್ದು, ಇದು ಸುಮಾರು 92 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಈ ಹಣ್ಣು ಹೆಚ್ಚು ಸಿಹಿಯಾಗಿರುವುದರ ಜತೆಗೆ ಆಂಟಿ ಆಕ್ಸಿಡೆಂಟ್​ಗಳನ್ನು ಹೊಂದಿರುತ್ತದೆ. ಜತೆಗೆ ಜೀವಸತ್ವಗಳು, ಖನಿಜಗಳು ಮತ್ತು ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದರ ಬೀಜಗಳಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿವೆ. ಈ ಬೀಜಗಳನ್ನು ಸೇವಿಸುವುದರಿಂದ ಎಷ್ಟೆಲ್ಲಾ ಆರೋಗ್ಯಕ್ಕೆ ಲಾಭಗಳಿವೆ ಎಂದು ತಿಳಿಯೋಣ..

ಕಲ್ಲಂಗಡಿ ಬೀಜದಲ್ಲಿರುವ ಪ್ರೋಟೀನ್, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಸತುವು ನಿಮ್ಮ ಕೂದಲಿಗೆ ಕೆಲವು ಪ್ರಮುಖ ಪೋಷಕಾಂಶಗಳಾಗಿವೆ. ನಿಮ್ಮ ಕೂದಲಿಗೆ ನಿಯಮಿತವಾಗಿ ಅವುಗಳನ್ನು ಹಚ್ಚುವುದರಿಂದ ನಿಮ್ಮ ಕೂದಲಿಗೆ ಸಂಪೂರ್ಣ ಪ್ರಯೋಜನಗಳನ್ನು ಪಡೆಯಬಹುದು. ಕೂದಲು ತೆಳುವಾಗುವುದು ಮತ್ತು ಕೂದಲು ಉದುರುವಿಕೆಯ ಸಮಸ್ಯೆಗೆ ಪರಿಹಾರ ನೀಡುವುದು.

ಕಲ್ಲಂಗಡಿ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದು ದೇಹದಲ್ಲಿ ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡಲು ಸಹಕರಿಸುತ್ತವೆ. ಹಾಗಾಗಿ ಮಧುಮೇಹಿಗಳಿಗೆ ಇದು ಬಹಳ ಒಳ್ಳೆಯದು.

ಹುರಿದ ಕಲ್ಲಂಗಡಿ ಬೀಜಗಳನ್ನು ತಿನ್ನುವುದು ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮೊಡವೆಗಳನ್ನು ತಡೆಯುತ್ತದೆ, ಚರ್ಮವನ್ನು ತೇವಾಂಶದಿಂದಿರುವಂತೆ ಮಾಡುತ್ತದೆ. ವಯಸ್ಸಾದ ಆರಂಭಿಕ ಚಿಹ್ನೆಗಳಾದ ನೆರಿಗೆ, ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ.

ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆ ಹೆಚ್ಚುತ್ತದೆ. ಕಲ್ಲಂಗಡಿ ಸಿಟ್ರುಲಿನ್ ಅನ್ನು ಹೊಂದಿರುತ್ತದೆ, ಇದು ಅರ್ಜಿನೈನ್ ಆಗಿ ಬದಲಾಗುತ್ತದೆ. ಉತ್ತಮ ರಕ್ತದ ಹರಿವನ್ನು ಉತ್ತೇಜಿಸಲು ರಕ್ತನಾಳಗಳನ್ನು ಹಿಗ್ಗಿಸಲು ಈ ಅಂಶವು ಕಾರಣವಾಗಿದೆ.

Ramya Bolantoor

Recent Posts

ಯುವ ನವದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಯುವ ನವ ದಂಪತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

30 mins ago

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಾಯಿ ನಿಧನ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ದೆಹಲಿ ಏಮ್ಸ್‌ನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ…

40 mins ago

ಪ್ರಬೀರ್ ಪುರಕಾಯಸ್ಥ ಬಂಧನ ಸರಿಯಾದ ಕ್ರಮವಲ್ಲ ಎಂದ ಸುಪ್ರೀಂ

ನ್ಯೂಸ್‌ ಕ್ಲಿಕ್‌ ಸುದ್ಧಿ ತಾಣದ ಸಂಸ್ಥಾಪಕರಾದ ಪ್ರಬೀರ್ ಪುರಕಾಯಸ್ಥ ಅವರನ್ನು ‘ಅಕ್ರಮ ಚಟುವಟಿಕೆ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು…

46 mins ago

ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿನಲ್ಲಿ ಹೊಡೆದಾಟ

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ಬೀದರ್‌ನಿಂದ ಕಲಬುರಗಿ ಬಸ್‌ನಲ್ಲಿ ಶಕ್ತಿ ಯೋಜನೆ ಅಡಿ ಉಚಿತ…

50 mins ago

ಹುಟ್ಟು ಹಬ್ಬದ ಸಂಭ್ರಮದಲ್ಲಿ ʼದಿಲ್ ತೋ ಪಾಗಲ್ ಹೈʼ ನಟಿ ಮಾಧುರಿ ದೀಕ್ಷಿತ್

ಬಾಲಿವುಡ್ ಚಿತ್ರರಂಗದ ಜನಪ್ರಿಯ ನಟಿ ಮಾಧುರಿ ದೀಕ್ಷಿತ್ ಇಂದು ತಮ್ಮ 57ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.  ಚಿತ್ರರಂಗದಲ್ಲಿ ನಟಿ ಮಾಧುರಿ…

59 mins ago

ಮೋದಿ ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದ ಅಮಿತ್‌ ಶಾ

ಮೋದಿ  ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

1 hour ago