News Karnataka Kannada
Sunday, April 28 2024
ಆರೋಗ್ಯ

ಡಯಾಬಿಟಿಸ್‌ ರೋಗಿಗಳಿಗೆ ಹೊಸ ಅಕ್ಕಿ ತಳಿ ಬಿಡುಗಡೆ

ಭಾರತ ಸಕ್ಕರೆ ಕಾಯಿಲೆ ರಾಜಧಾನಿಯಾಗುವ ಆತಂಕ ಎಲ್ಲರಲ್ಲೂ ಮನೆಮಾಡಿದೆ. ಎಳೆಯ ತರುಣರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಕಾಡುವ ಕಾಯಿಲೆಯಾಗಿರುವ ಡಯಾಬಿಟೀಸ್‌ ತಡೆಯುಲು ಅನ್ನ ಸೇವನೆ ಕಡಿಮೆ ಮಾಡಬೇಕು ಎಂಬ ಸಲಹೆ ನೀಡಲಾಗುತ್ತದೆ. ಆದರೆ ಅನ್ನವನ್ನು ಹೆಚ್ಚಾಗಿ ಸೇವಿಸುವವರಿಗೆ ಇದು ಸಾಧ್ಯವಿಲ್ಲ. ಅದಕ್ಕಾಗಿಯೇ ಕಡಿಮೆ ಸಕ್ಕರೆ ಅಂಶ ಹೊಂದಿರುವ ಭತ್ತವನ್ನು ಬೆಳೆಯಲು ರಾಜ್ಯದ ರೈತರು ಆರಂಭಿಸಿದ್ದಾರೆ.
Photo Credit : News Kannada

ಬೆಂಗಳೂರು: ಭಾರತ ಸಕ್ಕರೆ ಕಾಯಿಲೆ ರಾಜಧಾನಿಯಾಗುವ ಆತಂಕ ಎಲ್ಲರಲ್ಲೂ ಮನೆಮಾಡಿದೆ. ಎಳೆಯ ತರುಣರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಕಾಡುವ ಕಾಯಿಲೆಯಾಗಿರುವ ಡಯಾಬಿಟೀಸ್‌ ತಡೆಯುಲು ಅನ್ನ ಸೇವನೆ ಕಡಿಮೆ ಮಾಡಬೇಕು ಎಂಬ ಸಲಹೆ ನೀಡಲಾಗುತ್ತದೆ. ಆದರೆ ಅನ್ನವನ್ನು ಹೆಚ್ಚಾಗಿ ಸೇವಿಸುವವರಿಗೆ ಇದು ಸಾಧ್ಯವಿಲ್ಲ. ಅದಕ್ಕಾಗಿಯೇ ಕಡಿಮೆ ಸಕ್ಕರೆ ಅಂಶ ಹೊಂದಿರುವ ಭತ್ತವನ್ನು ಬೆಳೆಯಲು ರಾಜ್ಯದ ರೈತರು ಆರಂಭಿಸಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಆರ್‌ಎನ್‌ಆರ್-15048’ ಎಂಬ ಭತ್ತದ ತಳಿಯನ್ನು ಪರಿಚಯಿಸಲಾಗಿದೆ. ಸೋನಾ ಮಸೂರಿ ಸೇರಿದಂತೆ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಈ ಅಕ್ಕಿ ಕಡಿಮೆ ‘ಗೈಸಿಮಿಕ್ ಇಂಡೆಕ್ಸ್’ (ಜಿ.ಐ ಕಾರ್ಬೋಹೈಡ್ರೆಟ್ ಹೊಂದಿರುವ ಆಹಾರಗಳಿಗೆ ರೇಟಿಂಗ್) ಹೊಂದಿದೆ. ಇತರ ತಳಿಯ ಅಕ್ಕಿ ಸಾಮಾನ್ಯವಾಗಿ ಶೇ 56.5ರಷ್ಟು ಜಿ.ಐ ಹೊಂದಿದ್ದರೆ, ಈ ತಳಿಯ ಅಕ್ಕಿ ಶೇ 51.5ರಷ್ಟು ಹೊಂದಿದೆ. ರಾಗಿ ಹಾಗೂ ಸಿರಿ ಧಾನ್ಯಗಳ ರೀತಿಯಲ್ಲಿಯೇ ಆರ್‌ಎನ್‌ಆರ್ 15048 ಭತ್ತದ ತಳಿಯ ಅಕ್ಕಿಯು ನಿಧಾನವಾಗಿ ದೇಹಕ್ಕೆ ಸಕ್ಕರೆ ಅಂಶ ಬಿಡುಗಡೆ ಮಾಡುವ ವಿಶೇಷ ಗುಣ ಹೊಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು