ಮಂಗಳೂರು : ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಜೂ.10ರಂದು ಬೆಳಗ್ಗೆ 9.30ರಿಂದ ವೆನ್ಲಾಕ್ ಆಸ್ಪತ್ರೆಯ ಆರ್ಎಪಿಸಿಸಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ವೈದ್ಯಾಧಿಕಾರಿ ಡಾ.ಸದಾಶಿವ ಶಾನ್ಭೋಗ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್ಕ್ರಾಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಖಜಾಂಜಿ ಮೋಹನ್ ಶೆಟ್ಟಿ.ಕೆ., ಉಪ ಸಮಿತಿ ಚೇರ್ಮನ್ಗಳಾದ ಡಾ.ಬಿ.ಸಚ್ಚಿದಾನಂದ ರೈ, ಪಿ.ಬಿ.ಹರಿಪ್ರಸಾದ್ ರೈ, ಡಾ.ಕೆ.ಆರ್.ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಯೂತ್ ರೆಡ್ಕ್ರಾಸ್ನ ನಿರ್ದೇಶಕ ಸಚೇತ್ ಸುವರ್ಣ. ಯೇನೆಪೊಯ ಡೀಮ್ಡ್ ವಿ.ವಿ.ಯ ನೋಡಲ್ ಅಧಿಕಾರಿ ನಿತ್ಯಶ್ರೀ ಬಿ.ವಿ., ಯೋಜನಾಧಿಕಾರಿ ಜ್ಯೋತಿ ತರಬೇತಿ ನೀಡಲಿದ್ದಾರೆ ಎಂದು ರೆಡ್ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಸಂಜಯ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ…
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…
ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಕೊಲೆ ಪ್ರಕರಣ ಹಿನ್ನಲೆ ಈ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…
ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು…