News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಬಿಸಿಲಿನ ಝಳ ಹೆಚ್ಚಳ, ಬೇಕಿದೆ ಆರೋಗ್ಯ ಕಾಳಜಿ

Heat wave intensifies, health care needed
Photo Credit : Pixabay

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ದೇಶದಲ್ಲಿಯೇ ಅತ್ಯಧಿಕವಾಗಿದ್ದು, ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ. ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿದೆ. 2017ರಲ್ಲಿ 37.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು ಮಾರ್ಚ್‌ ತಿಂಗಳ ಈವರೆಗಿನ ದಾಖಲೆಯಾಗಿದೆ. ಉಭಯ ಜಿಲ್ಲೆಗಳಲ್ಲಿ ದಿನವಿಡೀ ಸೆಕೆ ಮತ್ತು ಉರಿಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು.

ಆರೋಗ್ಯ ಕಾಳಜಿ ಅಗತ್ಯ: ಹೆಚ್ಚುತ್ತಿರುವ ಬಿಸಿಲಿನ ಝಳ ದೇಹವನ್ನು ಸುಡುವಂತೆ ಮಾಡಲಿದೆ. ಜತೆಗೆ ಸುಟ್ಟ ಗಾಯಗಳೂ ಉಂಟಾಗಬಹುದು. ಇಂತಹ ಸೂರ್ಯನ ಕಿರಣ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಲಿದೆ. ಈ ಬಗ್ಗೆ ಗಮನಹರಿಸುವುದು ಅಗತ್ಯ.

ಹಿರಿಯ ನಾಗರಿಕರು, ಮಕ್ಕಳು, ರೋಗಿಗಳು, ಗರ್ಭಿಣಿಯರು ಮತ್ತು ಬಿಸಿಲಿನಲ್ಲಿ ದುಡಿಯುವವರು ಗಮನ ಹರಿಸುವುದು ಅಗತ್ಯ. ಇಂತಹ ಸಮಯದಲ್ಲಿ ಧಾರಾಳ ನೀರು ಕುಡಿಯವ ಮೂಲಕ ನಿರ್ಜಲೀಕರಣ ಸಮಸ್ಯೆ ತಡೆಗಟ್ಟಬೇಕು. ತಣ್ಣೀರನ್ನು ಕುಡಿಯಯವವರು ಅದರ ಶುದ್ಧತೆ ಬಗ್ಗೆ ಗಮನ ಹರಿಸಬೇಕು. ಬಿಸಿಲಿನಲ್ಲಿ ದುಡಿಯುವವರು ತಲೆಗೆ ಟೋಪಿ ಬಳಕೆ ಮಾಡಬೇಕು.

ಮಧ್ಯಾಹ್ನ ಹೊತ್ತು ರಸ್ತೆಗಳು ಖಾಲಿ: ಮಂಗಳೂರು ನಗರದಲ್ಲಿ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಝಳದಿಂದ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆಯಾಗುತ್ತಿದೆ. ತೀವ್ರ ಸಖೆ, ಉರಿ ವಾತಾವರಣದಿಂದ ಜನರು ಮನೆಯಿಂದ ಹೊರಬರಲು ತ್ರಾಸಪಡುತ್ತಿರುವುದು ಕಂಡುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು