ನ್ಯೂಯಾರ್ಕ್: ಡ್ರೈ ಕ್ಲೀನಿಂಗ್ ಗೆ ಬಳಸುವ ರಾಸಾಯನಿಕಗಳು ಪಾರ್ಕಿನ್ಸನ್ ಕಾಯಿಲೆಯ ಅಪಾಯವನ್ನು ಶೇಕಡಾ 70 ರಷ್ಟು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಡ್ರೈ ಕ್ಲೀನಿಂಗ್ ಮತ್ತು ಲೋಹಗಳನ್ನು ಡಿಗ್ರೀಸ್ ಮಾಡುವಾಗ ಬಳಸುವ ಟ್ರೈಕ್ಲೋರೆಥಿಲೀನ್ ರಾಸಾಯನಿಕ ಪಾರ್ಕಿನ್ಸನ್ ಕಾಯಿಲೆ ಅಪಾಯ ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ಹೇಳಿವೆ.
ಡ್ರೈ ಕ್ಲೀನಿಂಗ್ ಗೆ ಬಳಸುವ ಟ್ರೈಕ್ಲೋರೆಥಿಲೀನ್ (ಟಿಸಿಇ) ಒಂದು ದ್ರವ ರಾಸಾಯನಿಕವಾಗಿದ್ದು ಅದು ಗಾಳಿ, ನೀರು ಮತ್ತು ಮಣ್ಣಿನಲ್ಲಿ ದಶಕಗಳವರೆಗೆ ಇರುತ್ತದೆ. ಇದರಿಂದ ಕ್ಯಾನ್ಸರ್, ಪಾರ್ಕಿನ್ಸನ್ ಅಪಾಯವಿದೆ ಎಂದು ಸಂಶೋಧಕರು ಹೇಳಿದ್ದಾರೆ. ಟ್ರೈಕ್ಲೋರೋಎಥಿಲೀನ್ ಅನ್ನು ಸುಮಾರು 100 ವರ್ಷಗಳಿಂದ ಕೈಗಾರಿಕಾ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ.
1977 ರವರೆಗೆ ಶಸ್ತ್ರಚಿಕಿತ್ಸೆಯ ಅರಿವಳಿಕೆಯಾಗಿ ಬಳಸಲಾಗುತ್ತಿತ್ತು. ಬಳಿಕ ಇದರ ಅಪಾಯ ಅರಿತು ನಿಷೇಧ ಹೇರಲಾಗಿದೆ. ಈ ರಾಸಾಯನಿಕವನ್ನು ಇಂದು ಕೈಗಾರಿಕಾ ಲೋಹದ ಭಾಗಗಳನ್ನು ಡಿಗ್ರೀಸ್ ಮಾಡಲು ಬಳಸಲಾಗುತ್ತದೆ. ಟಿಇಸಿ ಒಮ್ಮೆ ಮಣ್ಣು ಅಥವಾ ಅಂತರ್ಜಲವನ್ನು ಪ್ರವೇಶಿಸಿದರೆ, ಅದು ದಶಕಗಳವರೆಗೆ ಇರುತ್ತದೆ.
: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು…
ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…
ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…