Categories: ಆರೋಗ್ಯ

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ ತಾನು ತಯಾರಿಸಿ ಪ್ರಪಂಚಕ್ಕೆ ನೀಡಿದ್ದ ಕೋವಿಶೀಲ್ಡ್ ವ್ಯಾಕ್ಸಿನ್​​ನಿಂದ ತುಂಬಾ ಅಪರೂಪದ ಪ್ರಕರಣಗಳಲ್ಲಿ ಮಾರಣಾಂತಿಕ ಅಡ್ಡ ಪರಿಣಾಮ ಉಂಟು ಮಾಡುತ್ತಿದೆ ಎಂದು ಲಂಡನ್​ ಕೋರ್ಟ್​ಗೆ ಹೇಳಿದೆ.

ಟಿಟಿಎಸ್​​ನಂಥ ಡೇಂಜರಸ್​ ಕಾಯಿಲೆಯನ್ನು ಕೊರೊನಾ ವ್ಯಾಕ್ಸಿನ್ ಉಂಟು ಮಾಡುತ್ತಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸಿದೆ. ಪರಿಣಾಮ ಆರ್ಥಿಕ ನೆಪವೊಡ್ಡಿ ಫಾರ್ಮಾ ಕಂಪನಿ, ಕೋವಿಡ್ 19 ಲಸಿಕೆಯನ್ನು ವಿಶ್ವದಾದ್ಯಂತ ಮಾರಾಟ ಮತ್ತು ಉತ್ಪಾದನೆಯನ್ನು ನಿಲ್ಲಿಸೋದಾಗಿ ಹೇಳಿದೆ.

ವಿಷಯ ಹೀಗಿರುವಾಗ ಮದುಮಕ್ಕಳ ಆಮಂತ್ರಣ ಪತ್ರಿಕೆಯೊಂದು ವೈರಲ್ ಆಗಿದೆ. ಅದರಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡವರು ಡ್ಯಾನ್ಸ್ ಮಾಡುವಂತಿಲ್ಲ ಎಂದು ಬರೆಸಲಾಗಿದೆ. ಅದನ್ನು ನೋಡಿದ ಜನರು ಬೆಚ್ಚಿಬಿದ್ದಿದ್ದಾರೆ. ಮಂಗಳ ಪತ್ರದಲ್ಲಿ ಅನೇಕ ಎಚ್ಚರಿಕೆ, ಸಲಹೆಗಳನ್ನು ನೀಡಿರೋದನ್ನು ನೋಡಿದ್ದೇವೆ. ಆದರೆ ಇವರು ಯಾಕೆ ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲ ಎಂದು ಬರೆದಿದ್ದಾರೆ ಅನ್ನುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಇದು ಕಾಕತಾಳಿಯವೋ, ನಿಜವೋ ಗೊತ್ತಿಲ್ಲ. ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ ಬೀರುತ್ತದೆ ಎಂಬ ಸುದ್ದಿ ವೈರಲ್ ಆಗ್ತಿದ್ದಂತೆ ಜನ ಎಚ್ಚೆತ್ತುಕೊಂಡಿದ್ದಾರೆ. ಜನ ಹಿಂದೆ ಆಗಿರುವ ಘಟನೆಗಳನ್ನು ಸ್ಮರಿಸಿಕೊಳ್ತಿದ್ದಾರೆ. ಅಂತೆಯೇ, ಈ ಮದುವೆ ಕಾರ್ಡ್​​ನಲ್ಲಿ ಕೋವಿಶೀಲ್ಡ್​ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲ ಅನ್ನೋದು ಕಟ್ಟಪ್ಪಣೆ.

ಅದಕ್ಕೆ ಕಾರಣ ಕೂಡ ಇದೆ. ಈ ಹಿಂದೆ ನಡೆದ ಮದುವೆಗಳಲ್ಲಿ ಡ್ಯಾನ್ಸ್ ಮಾಡುವ ವೇಳೆ ಅದೆಷ್ಟೋ ಮಂದಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅದರಲ್ಲೂ ಕೊರೊನಾ ವ್ಯಾಕ್ಸಿನ್ ಪಡೆದ ನಂತರ ಇಂತಹ ಪ್ರಕರಣಗಳು ಹೆಚ್ಚಾಗಿವೆ ಅನ್ನೋದು ವಾದ.

ಇದೇ ಕಾರಣಕ್ಕೆ ನಮ್ಮ ಮದುವೆಗೆ ಬರೋರು ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದರೆ ಡ್ಯಾನ್ಸ್ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದೆ ಜೋಡಿ. ಪುನೀತ್ ರಾಜ್​ ಕುಮಾರ್​ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದುಕೊಂಡಿದ್ದ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Chaitra Kulal

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

51 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago