Categories: ಆರೋಗ್ಯ

ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ: ಟಿ.ಎಸ್.ಶ್ರೀವತ್ಸ

ಮೈಸೂರು: ದೇಶದ ಅನ್ಯಭಾಷಿಕರು ಮತ್ತು ಹೊರ ದೇಶದ ಆಸಕ್ತರು, ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವ ಅವಕಾಶದಿಂದ  ವಂಚಿತರಾಗಿದ್ದು, ಸಿದ್ಧವೈದ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ನಗರದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ಸಭಾಂಗಣದಲ್ಲಿ ಅಗಸ್ತ್ಯ ಸಿದ್ದ ಸಾಹಿತ್ಯ ಸಂಶೋಧನಾ ಕೇಂದ್ರ  ಮೈಸೂರು, ಜಿಸಿಎಸ್‌ಎಂಆರ್ ಚೆನ್ನೈ ಯುಎಸ್‌ಐ ಪ್ರಕಾಶನ ಇವುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಸಿದ್ಧ ವೈದ್ಯ ಪಿ.ಎಸ್.ನರಸಿಂಹಸ್ವಾಮಿ ಅವರ ಆರೋಗ್ಯಕರ ಜೀವನಕ್ಕೆ ಅಗಸ್ತ್ಯ ಸಿದ್ಧ ಸಾಹಿತ್ಯ ವೈದ್ಯ ಪದ್ಧತಿ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಿದ್ಧ ವೈದ್ಯಸಾಹಿತ್ಯ ಸಂಪೂರ್ಣವಾಗಿ ಪ್ರಾಚೀನ ತಮಿಳು ಲಿಪಿಗಳಲ್ಲಿರುವುದರಿಂದಲೂ ಮತ್ತು ಪದ್ಯರೂಪದಲ್ಲಿ  ಬಿಡಿಸಲಾಗದ ಒಗಟಿನಂತಿರುವುದರಿಂದಲೂ, ಇದರ ಬಗ್ಗೆ ತಿಳಿದುಕೊಳ್ಳುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಕಲಿಯಲು ವಯಸ್ಸಿನ ಅಂತರವಿಲ್ಲ ಎಂಬುದು ನರಸಿಂಹ ಸ್ವಾಮಿ ಅವರ ಒಂದು ಕಲೆ ಇವತ್ತಿಗೆ ಸಾಕ್ಷಿಯಾಗಿದೆ. ಇತ್ತೀಚಿನ ದಿನದಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚುತ್ತಿದೆ. ಮುಂದಿನ ದಿನದಲ್ಲಿ ಇವರ ಗ್ರಂಥ ಸಾರ್ವಜನಿಕ ಗ್ರಂಥಾಲಯಲ್ಲಿ ಎಲ್ಲರಿಗೂ ಸಿಗುವಂತಹ ವ್ಯವಸ್ಥೆ ಆಗಬೇಕೆಂಬ ಹಂಬಲದಿಂದ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಮೈಸೂರಿನಲ್ಲಿ ಆಯುರ್ವೇದ ಔಷಧದ ವಿಷಯದ ಬಗ್ಗೆ ಎಲ್ಲರಿಗೂ ತಿಳಿಸುವಂತಹ ಕೆಲಸ ಮಾಡಲಾಗುತ್ತಿದ್ದು, ಇದರ ಜತೆಗೆ  ಪ್ರತಿದಿನ ನಮ್ಮ ದೇಹವನ್ನು ಆರೋಗ್ಯವಾಗಿ ಇಡುವುದಕ್ಕೆ ಯೋಗ ಮಾಡಬೇಕಿದೆ. ನಾಡಿ ಪರೀಕ್ಷೆ, ಅಷ್ಟ ಸ್ಥಾನ ಪರೀಕ್ಷೆ, ತ್ರಿದೋಷಗಳ ಗ್ರಹಿಕೆ, ರೋಗಿಯ ಮನಃಸ್ಥಿತಿ, ಅನುವಂಶೀಯ ಕಾಯಿಲೆಗಳ ತುಲನೆ ಇವೆಲ್ಲವೂ ಎರಡೂ ಪದ್ಧತಿಗಳಲ್ಲೂ ರೋಗನಿಧಾನ ಕ್ರಮಗಳು. ಕೆಲವೊಂದು ವಿಶಿಷ್ಠತೆಗಳು ಸಿದ್ಧ ವೈದ್ಯದಲ್ಲಿ ಮಾತ್ರ ಲಭ್ಯ. ಉದಾಹರಣೆಗೆ ಸಿದ್ಧವೈದ್ಯದಲ್ಲಿ ಉಲ್ಲೇಖಿಸಿರುವ ಲೋಹ, ಖನಿಜಗಳಿಂದ ವಿಶೇಷ ರೀತಿಯಲ್ಲಿ ತಯಾರಿಸಿದ ಭಸ್ಮ, ಸಿಂಧೂರ, ಸುಣ್ಣಗಳು 500 ವರ್ಷಗಳವರೆಗೂ ತಮ್ಮ ಔಷಧೀಯ ಗುಣಗಳನ್ನು ಕಾಪಾಡಿಕೊಂಡು ಕೆಡದೇ ಇರುವುದು. ಸಿದ್ಧವೈದ್ಯದ ಈ ರೀತಿಯ ವಿಶೇಷತೆಗಳು ಹತ್ತು ಹಲವು ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಆಯುರ್ವೇದ ತಜ್ಞರಾದ ಡಾ.ಎನ್.ಎಸ್.ರಾಮಚಂದ್ರ, ಡಾ.ಎ.ಎಸ್.ಚಂದ್ರಶೇಖರ್,  ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಕೆ.ಎಸ್.ರಾಧಾಕೃಷ್ಣ ರಾವ್, ಹಿರಿಯ ವಕೀಲರಾದ ಓ.ಶ್ಯಾಂ ಭಟ್, ಡಾ.ಸೆಲ್ವ ಷಣ್ಮುಗಂ, ಡಾ.ಅರುಳ್ ಅಮುದನ್ ಮತ್ತಿತರರು ಇದ್ದರು.

Ashika S

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

46 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

1 hour ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago