Categories: ಆರೋಗ್ಯ

ಬಿಸಿಲಿನ ತಾಪಕ್ಕೆ ದೇಹ ತಂಪಾಗಿಸಲು ರಾಗಿ ಅಂಬಲಿ ಸೇವನೆ ಮಾಡಿ

ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,  ದೇಹವನ್ನು ತಂಪಾಗಿಸಲು ರಾಗಿ ಅಂಬಲಿಯನ್ನು ಕುಡಿಯುವುದು ಉತ್ತಮ. ಬೇಸಿಗೆ ಸಮಯದಲ್ಲಿ  ದೇಹದ ಆಲಸ್ಯ ಮತ್ತು ದಣಿವು ಕಡಿಮೆ ಮಾಡಲು ಇದು ಸಹಕಾರಿ.

ರಾಗಿಯಲ್ಲಿ ಅನೇಕ ಪೋಷಕಾಂಶಗಳಿದ್ದು, ಆರೋಗ್ಯಕರವಾದ ಜೀವಸತ್ವಗಳು, ಕಬ್ಬಿಣ, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್‌ಗಳು, ಬಿ ಕಾಂಪ್ಲೆಕ್ಸ್, ಸತು, ಫೈಬರ್, ಪ್ರೋಟೀನ್‌ಗಳನ್ನು ಒಳಗೊಂಡಿದೆ. ರಾಗಿ ಅಂಬಲಿ ಬೆಳಗಿನಜಾವ ಉಪಾಹಾರಕ್ಕೆ ಮಾತ್ರವಲ್ಲ ರಾತ್ರಿಯ ಊಟಕ್ಕೂ ಒಳ್ಳೆಯದು. ಹಾಗಾಗಿ ಗೋಧಿ ಹಿಟ್ಟು ಇಷ್ಟಪಡದವರು ರಾಗಿ ಹಿಟ್ಟನ್ನೂ ಬಳಸಬಹುದು.

ಬೇಸಿಗೆಯಲ್ಲಿ ಬಿಸಿ ಆಹಾರಗಳು, ಮಸಾಲೆಯುಕ್ತ ಆಹಾರಗಳು ಮತ್ತು ಜಂಕ್ ಫುಡ್ಗಳನ್ನು ಕಡಿಮೆ ಮಾಡಬೇಕು. ರಾಗಿ ಅಂಬಲಿ ಕುಡಿಯುವುದರಿಂದ ಹೊಟ್ಟೆಗೆ ತುಂಬಾ ಆರಾಮದಾಯಕ ಮತ್ತು ತಂಪಾಗಿರುತ್ತದೆ.ರಾಗಿ ಅಂಬಲಿಯಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ನೀವು ರಾಗಿ ಅಂಬಲಿಯನ್ನು ಒಂದು ಲೋಟ ಕುಡಿದರೂ ನಾಲ್ಕು ಗಂಟೆಯಾದರೂ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಭಾವನೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ. ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು.

ಬೇಸಿಗೆಯಲ್ಲಿ ಮಾತ್ರವಲ್ಲದೆ ಪ್ರತಿನಿತ್ಯ ರಾಗಿ ಜಾವ ಕುಡಿದರೆ ಎಲುಬುಗಳು ಕೂಡ ಆರೋಗ್ಯಕರವಾಗಿರುತ್ತದೆ. ದೇಹವನ್ನು ಬಲವಾಗಿಸುವುದರ ಜತೆ ಗಟ್ಟಿಮುಟ್ಟಾಗಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ರಾಗಿ ಅಂಬಲಿ ಕುಡಿಯುವುದರಿಂದ ಶುಗರ್ ಕಂಟ್ರೋಲ್ ಆಗುತ್ತದೆ.

Chaitra Kulal

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

5 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

5 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

24 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

29 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

33 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

40 mins ago