ಹೈದರಾಬಾದ್: ತೆಲಂಗಾಣ ಸರ್ಕಾರದೊಂದಿಗೆ ಸಮರದಲ್ಲಿ ತೊಡಗಿರುವ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಸೋಮವಾರ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲಾ ವಾರ್ಡ್ಗಳಿಗೆ ಭೇಟಿ ನೀಡಿ ರೋಗಿಗಳು ಮತ್ತು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ಶತಮಾನದಷ್ಟು ಹಳೆಯದಾದ ಆಸ್ಪತ್ರೆಯ ಸ್ಥಿತಿಯ ಈ ಹಿಂದೆ ಅವರು ಕಳವಳ ವ್ಯಕ್ತಪಡಿಸಿದ್ದು, ಇದೀಗ ದಿಢೀರ್ ಭೇಟಿ ನೀಡಿರುವುದು ಸರ್ಕಾರದೊಂದಿಗಿನ ಮತ್ತೊಂದು ಸುತ್ತಿನ ಸಮರಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಟಿ. ಹರೀಶ್ ರಾವ್ ಮಾತನಾಡಿದ್ದು, ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸೌಂದರರಾಜನ್ ಅವರು ಆಸ್ಪತ್ರೆ ಸೌಲಭ್ಯಗಳ ಗುಣಮಟ್ಟ ಮತ್ತು ಸ್ಥಳಾವಕಾಶ ಕೊರತೆ ಕುರಿತು ಕಳವಳ ವ್ಯಕ್ತಪಡಿಸಿದರು. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.