Categories: ಆರೋಗ್ಯ

ಡೆಂಗ್ಯೂ ರೋಗದಿಂದ ಮುಕ್ತರಾಗಲು ಏನು ಮಾಡಬೇಕು?

ಮೈಸೂರು: ಡೆಂಗ್ಯೂ ರೋಗದಿಂದ ಆಗುವ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದ್ದು, ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಡೆಂಗ್ಯೂ ಈಡೀಸ್ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಹರಡುತ್ತದೆ. ಡೆಂಗ್ಯೂ ಸೋಂಕಿತ ನಾಲ್ಕು ಜನರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಅಂತವರಿಗೆ ಲಕ್ಷಣಗಳು ತೀವ್ರ ಅಥವಾ ಸೌಮ್ಯವಾಗಿ ಕಾಡಬಹುದು.

ಸೊಳ್ಳೆ ಕಚ್ಚಿದ 3-14 ದಿನಗಳ ಒಳಗೆ ಡೆಂಗ್ಯೂ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ತೀವ್ರ ಜ್ಞರದೊಂದಿಗೆ ಆರಂಭಗೊಳ್ಳುವ ಸಮಸ್ಯೆ ನಂತರ ಬೇರೆ ಬೇರೆ ಲಕ್ಷಣಗಳಿಂದ ರೋಗ ಉಲ್ಬಣಗೊಳ್ಳುತ್ತದೆ. ಮಳೆಗಾಲದಲ್ಲಿ ಹೆಚ್ಚು ಸೊಳ್ಳೆಗಳು ಉತ್ಪತ್ತಿ ಆಗುವುದರಿಂದ ಯಾವುದೇ ರೀತಿಯ ಜ್ವರ ಕಂಡುಬಂದಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.

ಡೆಂಗ್ಯೂ ರೋದ ಲಕ್ಷಣಗಳು -ಹೆಚ್ಚಿನ ಜ್ವರ-ತೀವ್ರ ತಲೆನೋವು-ಕಣ್ಣುಗಳ ಹಿಂದೆ ನೋವು-ವಾಂತಿ ಮತ್ತು ವಾಕರಿಕೆಯ ಭಾವನೆ-ಸ್ನಾಯುಗಳು ಮತ್ತು ಕೀಲುಗಳಲ್ಲಿ ನೋವು.

ಕೂಲರ್ ಗಳು ಮತ್ತು ಇತರ ಸಣ್ಣ ಕಂಟೇನರ್ ಗಳಿಂದ (ಪ್ಲಾಸ್ಟಿಕ್ ಕಂಟೇನರ್ ಗಳು, ಬಕೆಟ್ ಗಳು, ಬಳಸಿದ ಆಟೋಮೊಬೈಲ್ ಟೈರ್ ಗಳು, ವಾಟರ್ ಕೂಲರ್ ಗಳು, ಪೆಟ್ ವಾಟರ್ ಕಂಟೇನರ್ ಗಳು ಮತ್ತು ಹೂವಿನ ಕುಂಡಗಳಲ್ಲಿ ,ಮತ್ತು ತೆಂಗಿನ ಚಿಪ್ಪುಗಳಲ್ಲಿ, ಮನೆಯಲ್ಲಿನ ನೀರಿನ ತೊಟ್ಟಿ ಹಾಗೂ ಡ್ರಮ್) ನೀರನ್ನು ವಾರಕ್ಕೊಮ್ಮೆಯಾದರೂ ಖಾಲಿ ಮಾಡಬೇಕು.

ನೀರು ಶೇಖರಣಾ ಪಾತ್ರೆಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು. ಸೊಳ್ಳೆಗಳ ಕಡಿತವನ್ನು ತಡೆಯಲು ಹಗಲಿನಲ್ಲಿ ಏರೋಸಾಲ್ ಅನ್ನು ಬಳಸಬಹುದು. ಪ್ರಸರಣ ಕಾಲದಲ್ಲಿ (ಮಳೆಗಾಲದಲ್ಲಿ) ಜನರು ತಮ್ಮ ಕೈಕಾಲುಗಳನ್ನು ಮುಚ್ಚುವ ಬಟ್ಟೆಗಳನ್ನು ಧರಿಸಬೇಕು. -ಹಗಲಿನಲ್ಲಿ ಮಲಗುವಾಗ ಸೊಳ್ಳೆ ಪರದೆಗಳು ಅಥವಾ ಸೊಳ್ಳೆ ನಿವಾರಕಗಳನ್ನು ಬಳಸಬಹುದು.

ಡೆಂಗ್ಯೂ ರೋಗಕ್ಕೆ ಚಿಕಿತ್ಸೆಗಳು ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ಜನರು ವಿಶ್ರಾಂತಿ ಪಡೆಯುವುದು ಮೊದಲ ಆದ್ಯತೆ ಆಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹಾಗೂ ಜ್ಯೂಸ್ ಕುಡಿಯಬೇಕು. ಅವರು ಜ್ವರ ಮತ್ತು ದೇಹದ ನೋವಿಗೆ ಮಾತ್ರೆ ತೆಗೆದುಕೊಳ್ಳಬಹುದು ಮೇಲ್ಕಂಡ ರೋಗಲಕ್ಷಣಗಳು ತೀವ್ರವಾಗಿದ್ದರೆ ಹತ್ತೀರ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ.

Sneha Gowda

Recent Posts

ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ : ಯತ್ನಾಳ್ ಸ್ಪೋಟಕ ಹೇಳಿಕೆ

ಬೀದರ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ…

3 mins ago

ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ…

17 mins ago

ಸಿದ್ದಲಿಂಗ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು : ಓರ್ವ ಗಂಭೀರ

ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ…

46 mins ago

ಪ್ರಹ್ಲಾದ ಜೋಶಿ ನಿವಾಸಕ್ಕೆ ಇಂದು ಸಚಿವ ಅರ್ಜುನರಾಮ್ ಮೇಘವಾಲ್ ಭೇಟಿ

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ…

1 hour ago

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ…

2 hours ago

ಶತಕ ಸಿಡಿಸಿದ ವಿಲ್​ ಜಾಕ್ಸ್​ : ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು

ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ…

2 hours ago