ಯೋಗದಿಂದ ಉತ್ತಮ ಆರೋಗ್ಯ ಸಾಧ್ಯ: ಕೆ.ಸಿ.ಎನ್

ಮಂಡ್ಯ: ಯೋಗವನ್ನು ಪ್ರತಿದಿನ ನಿರಂತರವಾಗಿ ಅನುಸರಿಸಿಕೊಂಡು ಹೋದರೆ ಯಾವುದೇ ಕಾಯಿಲೆ ಬರುವುದಿಲ್ಲ. ಉತ್ತಮ ಆರೋಗ್ಯದೊಂದಿಗೆ ನಗು ಮುಖದಿಂದ ಇರಲು ಸಾಧ್ಯವಾಗುತ್ತದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ ಅವರು ತಿಳಿಸಿದರು.

 ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ  ಆವರಣದಲ್ಲಿ ಭಾರತ ಸರ್ಕಾರ, ಆಯುಷ್ ಸಚಿವಾಲಯ, ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಜಿಲ್ಲೆಯ  ಯೋಗ ನಿರತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಡೆದ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿ, ದೇಶದಲ್ಲಿ ಯೋಗಿಗಳು, ಋಷಿ ಮುನಿಗಳು ಯೋಗವನ್ನು ಹೆಚ್ಚಾಗಿ ಅಳವಡಿಸಿಕೊಂಡು 125ಕ್ಕೂ ಹೆಚ್ಚು ವರ್ಷಗಳು ಬದುಕಿದ್ದಾರೆ ಅದಕ್ಕೆ ಯೋಗವೇ ಕಾರಣ  ಆಗಾಗಿ ನಾವೆಲ್ಲರೂ ಯೋಗಕ್ಕೆ ಹೆಚ್ಚಿನ ಮಹತ್ವ ನೀಡಿ ಶಕ್ತಿ ತುಂಬಬೇಕಿದೆ ಎಂದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ ಮಾತನಾಡಿ, ದೇಹದಲ್ಲಿ ಕಾಯಿಲೆ ನಿವಾರಣೆ ಜೊತೆಗೆ ನಮ್ಮ ಇಂದ್ರಿಯಗಳು ಬಹಳ ಚೆನ್ನಾಗಿ ಕೆಲಸ ಮಾಡಬೇಕಾದರೆ  ನಿರಂತವಾಗಿ ಯೋಗಾಭ್ಯಾಸ ಮಾಡಬೇಕು. ಶಾಲೆ ಮತ್ತು ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ಪ್ರತಿದಿನ ಅರ್ಧಗಂಟೆಗಳ ಯೋಗಾಭ್ಯಾಸ ಮಾಡಿಸಿದರೆ ಅವರಿಗೆ ಏಕಾಗ್ರತೆ, ಶ್ರದ್ಧೆ ನೆನೆಪಿನ ಶಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.

 ಉಪನಿಷತ್ತುಗಳು, ಋಗ್ವೇದ ದಲ್ಲಿಯೂ ಸಹ ಯೋಗಾಭ್ಯಾಸದ ಬಗ್ಗೆ ಪ್ರಸ್ತಾಪವಿದೆ. ನಮ್ಮ ದೇಶದ ಋಷಿ – ಮುನಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡಿರುವುದು ನಮಗೆಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದರು. ಇತ್ತೀಚಿನ ದಿನದಲ್ಲಿ ಯುವಕರು ದೈಹಿಕ ಸದೃಢತೆಗಾಗಿ ಅನೇಕ ಉಪಕರಣಗಳನ್ನು ಬಳಸುತ್ತಾರೆ. ಆದರೆ ಯೋಗಾಭ್ಯಾಸದಿಂದ ದೈಹಿಕ ಸದೃಢತೆ ಜೊತೆಗೆ ಮಾನಸಿಕವಾಗಿಯೂ ಸಹ ಶಾಂತಿಯಿಂದ ಇರಬಹುದಾಗಿದೆ ಎಂದರು.

ಮದ್ದೂರಿನ ಶಿವಪುರ ಸತ್ಯಾಗ್ರಹ ಸೌದ ಆವರಣ, ಕೆ ಆರ್.ಪೇಟೆಯ ಲಕ್ಷ್ಮಿಜನಾರ್ಧನಸ್ವಾಮಿ ದೇವಸ್ಥಾನ ಹಾಗೂ ಆದಿ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಈ  ಬಾರಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಯೋಗ ದಿನಾಚರಣೆಯನ್ನು ಬಹಳ ಯಶಸ್ವಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್, ಪಾಂಡವಪುರ  ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ಗಳಾದ ಶ್ವೇತ ಎನ್.ರವೀಂದ್ರ, ನಯನ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಯೋಗ ಶಿಕ್ಷಕರಾದ ಶಂಕರ ನಾರಾಯಣ ಶಾಸ್ತ್ರಿ, ಪುರಸಭೆ ಉಪಾಧ್ಯಕ್ಷರಾದ ಎಂ.ಕೃಷ್ಣ, ಉಪಅರಣ್ಯ ಸಂರಕ್ಷಣಾಧಿಕಾರಿ ಋತ್ರನ್, ಹಿರಿಯ ಮುಖಂಡರಾದ  ಡಾ.ಸಿದ್ದರಾಮಯ್ಯ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

52 seconds ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

9 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

9 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

24 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

30 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

43 mins ago