ಬೆಂಗಳೂರು: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವವರು ಪಿ.ಜಿ. ಡಿಪ್ಲೊಮಾ, ಪತ್ರಿಕೋದ್ಯಮ ಅಥವಾ ಸಮೂಹ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು. ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಹೊಂದಿರಬೇಕು. 24 ರಿಂದ 45 ವರ್ಷದೊಳಗೆ ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ, ಪುರಸಭೆ ವ್ಯಾಪ್ತಿಯ 10 ಕಿಲೋಮೀಟರ್ ಆಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.
ಕಂಪ್ಯೂಟರ್ ಮತ್ತು ವರ್ಡ್ ಪ್ರೊಸೆಸಿಂಗ್ ತಿಳುವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು. ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವಿರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಸೆಪ್ಟೆಂಬರ್ 30 ರೊಳಗೆ ಕಳುಹಿಸಬೇಕು.
ಅರ್ಜಿಯನ್ನು The Deputy Director General (E) & HOO, ಪ್ರಾದೇಶಿಕ ಸುದ್ದಿ ವಿಭಾಗ, ಆಕಾಶವಾಣಿ, ರಾಜಭವನ ರಸ್ತೆ, ಬೆಂಗಳೂರು – 560001 ಈ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22356344 ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು, ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗದ ಮುಖ್ಯಸ್ಥರಾದ ಎಚ್.ಆರ್ ಸುಧೀಂದ್ರ ಅವರು ತಿಳಿಸಿದ್ದಾರೆ.