News Karnataka Kannada
Monday, May 06 2024
ಉದ್ಯೋಗ

ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗೆ  ಅರ್ಜಿ ಆಹ್ವಾನ

Apply for the post of part-time reporter in All India Radio
Photo Credit : By Author

ಬೆಂಗಳೂರು: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ ಮತ್ತು ಮಂಡ್ಯ  ಜಿಲ್ಲೆಗಳಿಗಾಗಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬಯಸುವವರು ಪಿ.ಜಿ. ಡಿಪ್ಲೊಮಾ, ಪತ್ರಿಕೋದ್ಯಮ ಅಥವಾ ಸಮೂಹ ಮಾಧ್ಯಮದಲ್ಲಿ ಪದವಿ ಪಡೆದಿರಬೇಕು. ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಹೊಂದಿರಬೇಕು. 24 ರಿಂದ 45 ವರ್ಷದೊಳಗೆ ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ,  ಪುರಸಭೆ ವ್ಯಾಪ್ತಿಯ 10 ಕಿಲೋಮೀಟರ್ ಆಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.

ಕಂಪ್ಯೂಟರ್ ಮತ್ತು ವರ್ಡ್ ಪ್ರೊಸೆಸಿಂಗ್ ತಿಳುವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ  ವರದಿಗಾರಿಕೆಯಲ್ಲಿ ಅನುಭವವಿರಬೇಕು. ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವಿರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಸೆಪ್ಟೆಂಬರ್ 30 ರೊಳಗೆ ಕಳುಹಿಸಬೇಕು.

ಅರ್ಜಿಯನ್ನು The Deputy Director General (E) & HOO, ಪ್ರಾದೇಶಿಕ ಸುದ್ದಿ ವಿಭಾಗ, ಆಕಾಶವಾಣಿ, ರಾಜಭವನ ರಸ್ತೆ, ಬೆಂಗಳೂರು –  560001 ಈ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22356344 ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು, ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗದ ಮುಖ್ಯಸ್ಥರಾದ ಎಚ್.ಆರ್ ಸುಧೀಂದ್ರ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು