Categories: ಉದ್ಯೋಗ

ಉದ್ಯೋಗವಕಾಶ : ಎಸ್‌ ಬಿಐಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಶಾಖೆಗಳಲ್ಲಿ ಕ್ಲರಿಕಲ್ ಕೇಡರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್‌ 7ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಮೇಲಿನ ಹುದ್ದೆಯು ಭಾರತದಾದ್ಯಂತ ಇರುವ ಎಸ್‌ ಬಿ ಐನ ವಿವಿಧ ಶಾಖೆಗಳಲ್ಲಿ ಖಾಲಿ ಇದ್ದು ಅವುಗಳಲ್ಲಿ ರಾಜ್ಯವಾರು ಉತ್ತರ ಪ್ರದೇಶ -1781, ಆಂಧ್ರ ಪ್ರದೇಶ – 50, ಮಧ್ಯಪ್ರದೇಶ – 288, ರಾಜಸ್ಥಾನ -940, ದೆಹಲಿ- 437, ಉತ್ತರಾಖಂಡ -215, ಛತ್ತೀಸ್‌ಗಢ- 212, ತೆಲಂಗಾಣ -525, ಅಂಡಮಾನ ಮತ್ತು ನಿಕೋಬಾರ್ ದ್ವೀಪಗಳು -20,ಹಿಮಾಚಲ ಪ್ರದೇಶ -180, ಹರಿಯಾಣ -267, ಜಮ್ಮು ಮತ್ತು ಕಾಶ್ಮೀರ -88, ಒಡಿಶಾ -72, ಪಂಜಾಬ್ -180, ಸಿಕ್ಕಿಂ -04, ತಮಿಳುನಾಡು -171, ಪುದುಚೇರಿ -04, ಪಶ್ಚಿಮ ಬಂಗಾಳ -114, ಕೇರಳ -47 , ಲಕ್ಷದ್ವೀಪ -03 , ಮಹಾರಾಷ್ಟ್ರ – 100 , ಅಸ್ಸಾಂ – 430 , ಅರುಣಾಚಲ ಪ್ರದೇಶ – 69, ಮಣಿಪುರ – 26, ಮೇಘಾಲಯ – 77, ಮಿಜೋರಾಂ – 17, ನಾಗಾಲ್ಯಾಂಡ್ – 40, ತ್ರಿಪುರ – 26 , ಗುಜರಾತ್ – 820 , ಕರ್ನಾಟಕ – 450 , ಲಡಾಖ್ – 50, ಬಿಹಾರ – 415, ಜಾರ್ಖಂಡ್ – 165 ಹುದ್ದೆಗಳು ಖಾಲಿ ಇವೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 07-12-2023

ಪೂರ್ವಭಾವಿ ಪರೀಕ್ಷೆಯ ದಿನಾಂಕ (ತಾತ್ಕಾಲಿಕ): 27.12.2023 ನಂತರ

ಮುಖ್ಯ ಪರೀಕ್ಷೆಯ ದಿನಾಂಕ (ತಾತ್ಕಾಲಿಕ): 15.02.2024 ನಂತರ

ವಯಸ್ಸಿನ ಮಿತಿ (01-04-2023 ರಂತೆ)

ಕನಿಷ್ಠ ವಯಸ್ಸಿನ ಮಿತಿ: 20 ವರ್ಷಗಳು

ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ/ ಓಬಿಸಿ/ಇಡಬ್ಲ್ಯೂಎಸ್‌ ಅಭ್ಯರ್ಥಿಗಳಿಗೆ : ರೂ. 750

ಎಸ್‌ ಸಿ/ ಎಸ್‌ ಟಿ/ ಪಿ ಡಬ್ಲ್ಯೂಡಿ/ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇಲ್ಲ

ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಯಾವುದೇ ತತ್ಸಮಾನ ಅರ್ಹತೆ ಹೊಂದಿರಬೇಕು. ಅಥವಾ ತಮ್ಮ ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವವರೂ ಅರ್ಜಿ ಸಲ್ಲಿಸಬಹುದು. ಆದರೆ ಇವರು ಆಯ್ಕೆಯಾದರೆ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಗಳನ್ನು ಸಲ್ಲಿಸಬೇಕು.

Ramya Bolantoor

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

20 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

34 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

49 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago