Categories: ಉದ್ಯೋಗ

ನಿರುದ್ಯೋಗಿಗಳಿಗೆ ಇಸ್ರೋ ನೀಡುತ್ತಿದೆ ಸುವರ್ಣಾವಕಾಶ

ಬೆಂಗಳೂರು: ನಿರುದ್ಯೋಗಿಗಳಿಗೆ  ಹಾಗೂ ಇಸ್ರೋದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಆಸೆ ಇದ್ದವರಿಗೆ ಇಸ್ರೋ ನೀಡಿದೆ ಒಂದು ಗುಡ್‌ ನ್ಯೂಸ್‌.ಇಸ್ರೋದ ನ್ಯಾಷನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌ (NRSC) ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌, ರಿಸರ್ಚ್‌ ಸೈಂಟಿಸ್ಟ್‌ ಸೇರಿ ಸುಮಾರು 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್‌ 8.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ರಿಸರ್ಚ್‌ ಸೈಂಟಿಸ್ಟ್‌ – 20 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿ.ಇ ಅಥವಾ ಸಿವಿಲ್‌ ಎಂಜಿನಿಯರಿಂಗ್‌ / ಅಗ್ರಿಕಲ್ಚರಲ್‌ ಎಂಜಿನಿಯರಿಂಗ್‌, ಸಿಎಸ್‌ಇಯಲ್ಲಿ ಬಿ.ಟೆಕ್‌. ಎಂ.ಎಸ್‌ಸಿ, ಎಂ.ಇ ಅಥವಾ ಎಂ.ಟೆಕ್‌
ಪ್ರಾಜೆಕ್ಟ್ ಸೈಂಟಿಸ್ಟ್-I – 6 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಸಿಎಸ್‌ಇಯಲ್ಲಿ ಬಿ.ಟೆಕ್‌, ಎಂ.ಇ ಅಥವಾ ಎಂ.ಟೆಕ್‌
ಪ್ರಾಜೆಕ್ಟ್ ಸೈಂಟಿಸ್ಟ್-ಬಿ – 4 ಹುದ್ದೆ, ವಿದ್ಯಾರ್ಹತೆ: ಸಿಎಸ್‌ಇಯಲ್ಲಿ ಬಿ.ಇ ಅಥವಾ ಬಿ.ಟೆಕ್‌
ಪ್ರಾಜೆಕ್ಟ್ ಅಸೋಸಿಯೇಟ್-I – 2 ಹುದ್ದೆ ವಿದ್ಯಾರ್ಹತೆ: ಎಂ.ಎಸ್‌ಸಿ
ಪ್ರಾಜೆಕ್ಟ್ ಅಸೋಸಿಯೇಟ್-II – 12 ಹುದ್ದೆ, ವಿದ್ಯಾರ್ಹತೆ: ಸಿಎಸ್‌ಇಯಲ್ಲಿ ಬಿ.ಇ ಅಥವಾ ಬಿ.ಟೆಕ್‌, ಎಂ.ಇ ಅಥವಾ ಎಂ.ಟೆಕ್‌
ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್‌) – 27 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಎಂ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌ ಅಥವಾ ಎಂ.ಟೆಕ್‌.

ಉದ್ಯೋಗದ ಸ್ಥಳ: ಬೆಂಗಳೂರು, ಹೈದರಾಬಾದ್‌, ನಾಗಪುರ, ಕೋಲ್ಕತ್ತಾ.

ಗರಿಷ್ಠ ವಯೋಮಿತಿ
ರಿಸರ್ಚ್‌ ಸೈಂಟಿಸ್ಟ್‌ – 30 ವರ್ಷ, ಪ್ರಾಜೆಕ್ಟ್ ಸೈಂಟಿಸ್ಟ್-I, ಪ್ರಾಜೆಕ್ಟ್ ಸೈಂಟಿಸ್ಟ್-ಬಿ, ಪ್ರಾಜೆಕ್ಟ್ ಅಸೋಸಿಯೇಟ್-I, ಪ್ರಾಜೆಕ್ಟ್ ಅಸೋಸಿಯೇಟ್-II – 35 ವರ್ಷ, ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್‌) – 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 31,000 ರೂ. -56,100 ರೂ. ಮಾಸಿಕ ವೇತನ ಲಭ್ಯ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

https://www.nrsc.gov.in/sites/default/files/pdf/Careers/NRSC_RMT_2_2024_18032024V1.pdf

Nisarga K

Recent Posts

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ ಶ್ರೀಮತಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

23 seconds ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

20 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

44 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago