ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹು ಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮಾಡಿ ವಸತಿಗಳನ್ನು ಹಸ್ತಾಂತರ ಮಾಡಿದರು.
ವಸತಿ ಸಚಿವ ವಿ.ಸೋಮಣ್ಣ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ , ಸಚಿವ ನಾರಾಯಣ ಗೌಡ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮಾಜಿ ಶಾಸಕ ನಾಗರಾಜ್, ವಸತಿ ಇಲಾಖೆ ಕಾರ್ಯದರ್ಶಿ ನಿಗಮದ ರವಿಶಂಕರ್, ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.