ಚಾಮರಾಜನಗರ: ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.
ಬಂಡೀಪುರ ಬಳಿಯ ಮೇಲುಕಾಮನಹಳ್ಳಿಯ ಹೆಲಿಪ್ಯಾಡ್ ಗೆ ಬಂದಿಳಿದ ಬಳಿಕ ಪ್ರಧಾನಿಯವರು ರಸ್ತೆ ಮೂಲಕ ಬಂಡಿಪುರದ ಅರಣ್ಯ ಇಲಾಖೆಯ ಸ್ವಾಗತ ಕೇಂದ್ರಕ್ಕೆ ಆಗಮಿಸಿದರು.ಅಲ್ಲಿಯೇ ಇದ್ದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ನಮಿಸಿ ಬಳಿಕ ಸಫಾರಿಗೆ ತೆರಳಿದರು.