ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಬಾಂಧವ ಸೇವಾ ಸಂಸ್ಥೆ ವತಿಯಿಂದ ದುರ್ಗ ಪರಮೇಶ್ವರಿ ಆಟದ ಮೈದಾನ,ಜೆ.ಪಿ.ನಗರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೆರೆ ಜೇಡಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ವಿತರಣೆಯನ್ನು ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿ,ಮಾಜಿ ಆಡಳಿತ ಪಕ್ಷದ ನಾಯಕರಾದ ಎನ್.ನಾಗರಾಜುರವರು ವಿತರಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿರವರು ಮಾತನಾಡಿ ಪ್ರಕೃತಿ ಮನುಷ್ಯ ಬೇಕಾದ ಆಹಾರ,ನೀರು ಮತ್ತು ಉಸಿರಾಡಲು ಉತ್ತಮ ಗಾಳಿ ನಮಗೆ ನೀಡಿದೆ. ಅದರೆ ಮನುಷ್ಯ ದುರಾಸೆ ಮತ್ತು ಅಭಿವೃದ್ದಿ ಹೆಸರಿನಲ್ಲಿ ಗಿಡಮರಗಳನ್ನು ಕಡಿದು ಮತ್ತು ಪ್ರಕೃತಿ ವೈಪರೀತ್ಯದಿಂದ ಮಳೆ ಸಹ ಅಕಾಲಕ್ಕೆ ಆಗುತ್ತಿದೆ. ಬೇಳೆಗಳಿಗೆ ರಾಸಯನಿಕ ಸಿಂಪಡನೆ ನಾನ ಕಾರಣದಿಂದ ನೀರು ಮತ್ತು ವಾತವರಣ ಕಲುಷಿತವಾಗಿದೆ.
ಪ್ರತಿಯೊಬ್ಬ ನಾಗರಿಕರು ಪರಿಸರ ಉಳಿಸಲು,ರಕ್ಷಣೆ ಮಾಡಲು ಪಣ ತೊಡಬೇಕು ಈ ನಿಟ್ಟಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ,ಗಣೇಶ ಮೂರ್ತಿಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಮಣ್ಣಿನ ಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗುತ್ತದೆ,ಪರಿಸರವು ಉಳಿಯುತ್ತದೆ ಎಂದು ಹೇಳಿದರು.
ಮಾಜಿ ಆಡಳಿತ ಪಕ್ಷದ ನಾಯಕರಾದ ಎನ್.ನಾಗರಾಜುರವರು ಮಾತನಾಡಿ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ ಮತ್ತು ಶಾಸಕರಾದ ಶ್ರೀಮತಿ ಸೌಮ್ಯರೆಡ್ಡಿರವರ ಮಾರ್ಗದರ್ಶನದಲ್ಲಿ ಬಾಂಧವ ಸಂಸ್ಥೆಯ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಪರಿಸರ ಸ್ನೇಹಿ ಮಣ್ಣಿನ 5000ಗೌರಿ ಗಣೇಶಮೂರ್ತಿಗಳನ್ನು ವಿತರಿಸಲಾಗುತ್ತಿದೆ.
ಬಾಂಧವ ಸಂಸ್ಥೆ ಕಳೆದ 10ವರ್ಷಗಳಿಂದ ಪರಿಸರ ,ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಪರಿಸರ ರಕ್ಷಣೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
photo credit: G Mohan