ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಆಯೋಜಿಸಿದ್ದ ವಕೀಲರ ಭವನದ 5, 6 ಮತ್ತು 7 ನೇ ಮಹಡಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಲೋಕೊಪಯೋಗಿ ಸಚಿವರಾದ ಸಿ.ಸಿ. ಪಾಟೀಲ್, ಗುಜರಾತ್ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ, ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ನಜೀರ್ ಅಹಮದ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ, ಕಟ್ಟಡ ಸಮಿತಿ ಅಧ್ಯಕ್ಷ ಬಿ.ವಿ.ಆಚಾರ್ಯ, ಉಪಾಧ್ಯಕ್ಷ ಕೆ.ಎನ್.ಪುಟ್ಟೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಟಿ.ಜಿ.ರವಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಾ ರೆಡ್ಡಿ,ಮೊದಲಾದವರು ಉಪಸ್ಥಿತರಿದ್ದರು.