ಮಂಗಳೂರು: ಮುಕ್ಕ ಒಂದನೇ ವಾರ್ಡಿನಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಸಮಾಜದ ವಿವಿಧ ಮುಖಂಡರು, ಪಕ್ಷದ ಹಿರಿಯರ ಮುಖಂಡರು, ಜನಸಂಘದಿಂದಲೂ ಪಕ್ಷಕ್ಕಾಗಿ ಸೇವೆ ಸಲ್ಲಿಸಿದವರ ಮನೆಗಳಿಗೆ ತೆರಳಿ ಆರ್ಶೀವಾದ ಪಡೆದರು.
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ಎರಡನೇ ವಾರ್ಡಿನಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಕಾರ್ಯಕರ್ತರ ಹಾಗೂ ಮತದಾರರ ಕಾರ್ನರ್ ಮಿಟೀಂಗ್ ಗಳನ್ನು ನಡೆಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.