ಯಲಹಂಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾಚೋಹಳ್ಳಿ ವೃಕ್ಷೋದ್ಯಾನ ವನ್ನು ಉದ್ಘಾಟನೆ ಮಾಡಿ ವನ ಮಹೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ, ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ, ಅರಣ್ಯ ಇಲಾಖೆ ಎಸಿಎಸ್ ಜಾವೇದ ಅಖ್ತರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ಲಿಂಗರಾಜು ಮತ್ತು ಇತರರು ಉಪಸ್ಥಿತರಿದ್ದರು.