News Karnataka Kannada
Monday, April 29 2024
ಸಮುದಾಯ

ಕಡಬ : ಬ್ಲಾಕ್ ವ್ಯಾಪ್ತಿಯ ಜಿಲ್ಲಾ ಪಂಚಾಯತ್, ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ

Untitled 208
Photo Credit :
ಕಡಬ : ಇಲ್ಲಿನ ಬ್ಲಾಕ್‌ ವ್ಯಾಪ್ತಿಯ ಕೊಯ್ಲ, ನೆಲ್ಯಾಡಿ, ಸುಬ್ರಹ್ಮಣ್ಯ, ಸವಣೂರು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಸಂವಾದ ಸಭೆ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ನಡೆಸಿಕೊಟ್ಟರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು , ಕಡಬ ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್ ಶೆಟ್ಟಿಯವರು ಭಾಗವಹಿಸಿದರು.
 ಸಭೆಯಲ್ಲಿ ಪಂಚಾಯತ್ ಗೆ ಸಂಬಂಧಪಟ್ಟ ವಿಷಯಗಳಾದ ಜಮೀನಿನ ಸಮಸ್ಯೆ, 9 & 11 , ಅನುದಾನದ ಕೊರತೆ ಹೀಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶೀಘ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು ಪಿ ಪಿ ವರ್ಗೀಸ್, ಸರ್ವೋತ್ತಮ ಗೌಡ, ಡಾ.ರಘು ಕೆಪಿಸಿಸಿ ಉಸ್ತುವಾರಿ, ಕೃಷ್ಣಪ್ಪ ವಿಜಯ ಕುಮಾರ್ ಸೊರಕೆ, ಥಾಮಸ್ , ಶೀನಪ್ಪ ಗೌಡ ಗಂಗಾಧರ್ ಶೆಟ್ಟಿ ಉಪಸ್ಥಿತರಿದ್ದರು.
Report credit : ಮಂಜುನಾಥ ಭಂಡಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು