News Karnataka Kannada
Saturday, April 27 2024
ಸಮುದಾಯ

`ಗಾಂಧಿ ಸಾಗರದ ಬಿಂದುಗಳು ; ಕೃತಿ ಅವಲೋಕನ

New Project (55)
Photo Credit :

ಮೂಡುಬಿದಿರೆ: ಸ್ವಾಸ್ಥ ಸಮಾಜಕ್ಕೆ ಗಾಂಧಿ ತತ್ವಗಳು ಅವಶ್ಯ ಎಂದು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದಪ್ರಾಧ್ಯಾಪಕ ಡಾ. ಕೃಷ್ಣರಾಜ ಕರಬ ಹೇಳಿದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ನಡೆದ ಸದಾನಂದ ನಾರಾವಿಯವರ `ಗಾಂಧಿ ಸಾಗರದ ಬಿಂದುಗಳು  ಕೃತಿ ಅವಲೋಕನ ಕಾರ್ಯಕ್ರಮದಲ್ಲಿ ಕೃತಿಯನ್ನು ವಿಮರ್ಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶೋಷಣೆಗೆ ಒಳಾಗಾದ ಪಂಗಡ ಮತ್ತು ಗ್ರಾಮೀಣ ಜನರ ನೋವಿಗೆ ಸ್ಪಂದಿಸುವ ಗುಣ ಬೆಳಸಿಕೊಂಡರೆ, ಜಗತ್ತಿನ ಕಷ್ಟಗಳಿಗೆ ಸ್ಪಂದಿಸುವ ಸಾಮರ್ಥ್ಯ ಬೆಳೆಯುತ್ತದೆ. ಜಾತಿ ಲೆಕ್ಕಾಚಾರ ಇರದೇ ಸರ್ವ ಧರ್ಮ ಸಹಿಷ್ಣು ಭಾವನೆ ಎಲ್ಲರಲ್ಲೂ ಇರಬೇಕು, ಗಾಂಧೀಜಿಯು ಎಲ್ಲ ಧರ್ಮವನ್ನು ಗೌರವಿಸುವವರು, ಗಾಂಧಿ ತತ್ವಗಳಿಂದ ಸಮಾಜದ ಸ್ವಾಸ್ಥ ಹೆಚ್ಚುತ್ತದೆ. ಇಂತಹ ಕೃತಿಗಳನ್ನು ಪಠ್ಯ ಪುಸ್ತಕಕ್ಕೆ ಸೇರಿಸಿದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ನಿರ್ಮಾಣದ ಚಿಂತನೆಗಳು ಬೆಳೆಯುತ್ತದೆ ಎಂದು ಹೇಳಿದರು.

ಇದೇ ಸಂರ್ದಭದಲ್ಲಿ  “ಗಾಂಧಿ ಸಾಗರದ ಬಿಂದುಗಳು” ಪುಸ್ತಕದ ಲೇಖಕರಾದ ಸದಾನಂದ ನಾರವಿ, ಬದುಕಿನಲ್ಲಿ ಮೌಲ್ಯಗಳು ಬಹಳ ಮುಖ್ಯ ಹಾಗೂ ಅವುಗಳು ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ. ಮೌಲ್ಯಗಳಿಲ್ಲದ ಮತ್ತು ವಿದ್ಯೆಯಿಲ್ಲದ ಮನುಷ್ಯರಿಗೆ, ಬೆಲೆ ಇರುವುದಿಲ್ಲ. ಕೆಲವೊಮ್ಮೆ ವಿದ್ಯೆ ಇರುವವನಿಗೆ ಹೆದರಿಕೆಯಿಂದಲೂ ಗೌರವ ಕೊಡುತ್ತಾರೆ, ಅದೇ ಮೌಲ್ಯಗಳಿರುವ ಮನುಷ್ಯರಿಗೆ ಅವರ ಆದರ್ಶಗಳೇ ಗೌರವ ತಂದು ಕೊಡುತ್ತದೆ. ಮಾನವೀಯ ಮೌಲ್ಯಗಳ ಚಿಂತನೆಗಳು ನಶಿಸಿ ಹೋಗದಂತೆ ನೋಡಿಕೊಂಡು ಮುOದಿನ ಪೀಳಿಗೆಗೆ ತಲುಪುವಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗಿಶ್ ಕೈರೋಡಿ, ಉಪನ್ಯಾಸಕ ಹರೀಶ್ ಟಿ ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಉಮಾಶ್ರೀ ವಂದಿಸಿದರು, ಉಪನ್ಯಾಸಕಿ ಡಾ. ಜ್ಯೋತಿ ರೈ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು