Categories: ಸಮುದಾಯ

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 36 ನೇ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ಸಂಸ್ಕೃತಿ, ಸಂಸ್ಕಾರಗಳಿಗೆ ಸಮನವಾದ ವಿದ್ಯೆಯನ್ನು ಪಡೆಯದೆ ಇದ್ದರೆ ಜೀವನವನ್ನು ನಿರೂಪಿಕೊಳ್ಳಲು ಕಷ್ಟವಾಗುತ್ತದೆ. ಸಮಾಜದಲ್ಲಿ ಉತ್ತಮ ನಾಯಕನಾಗಿ ಬೆಳೆಯಲು ಸಂಸ್ಕಾರಯುತ ಬದುಕನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಆ ನಿಟ್ಟಿನಲ್ಲಿ ಶಿಶು ಮಂದಿರಗಳಲ್ಲಿ ದೊರೆಯುವ ಶಿಕ್ಷಣ ಸತ್ಪ್ರಜೆಗಳನ್ನು ರೂಪಿಸುವಂತೆ ಇದೆ ಎಂದು ಉಡುಪಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು.

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ಗಂಗೊಳ್ಳಿ ಶ್ರೀ ವೀರ ವಿಠಲ ಸಭಾಭವನದಲ್ಲಿ ಶುಕ್ರವಾರ ನಡೆದ 36ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಮಕ್ಕಳದ್ದು ಮೃದು ಸ್ವಭಾವ ಒಳ್ಳೆಯದ್ದು ಮತ್ತು ಕೆಟ್ಟದನ್ನು ಬಹಳಷ್ಟು ಬೇಗನೆ ರೂಢಿ ಮಾಡಿಕೊಳ್ಳುತ್ತಾರೆ ಮಕ್ಕಳ ಮನಸ್ಥಿತಿಗೆ ತಕ್ಕಂತೆ ಅವರ ಜೀವನವನ್ನು ನಿರೂಪಿಸುವುದು ಪೋಷಕರ ಕರ್ತವ್ಯವಾಗಿದೆ. ಶಿಶು ಮಂದಿರದ ಮೂಲಕ ಪುಟ್ಟಮಕ್ಕಳಿಗೆ ಜ್ಞಾನಯುತ,ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು.

ಉಡುಪಿ ಪಲಿಮಾರು ಮಠದ ಕಿರಿಯ ಪೀಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ದೇವರಾಯ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಸೇವಾ ಸಂಗಮ ಟ್ರಸ್ಟ್‍ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ, ಗಂಗೊಳ್ಳಿ ಸ.ವಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್, ಶಿಶು ಮಂದಿರದ ಸದಸ್ಯರು,ಮಾತಾಜಿ ಭಾಗೀರಥಿ, ನಾಗರತ್ನ ಉಪಸ್ಥಿತರಿದ್ದರು. ಶಿಶು ಮಂದಿರದಲ್ಲಿ ಸೇವೆ ಸಲ್ಲಿಸಿದ ಮತ್ತು ಸೇವೆ ಸಲ್ಲಿಸುತ್ತಿರುವ ಮಾತಾಜಿಯವರನ್ನು ಸನ್ಮಾನಿಸಲಾಯಿತು ಹಾಗೂ ದಾನಿಗಳನ್ನು ಗೌರವಿಸಲಾಯಿತು.

ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಮತ್ತು ಜಿ.ಪ್ರದೀಪ ಭಟ್ ವೇದಘೋಷ ಹಾಡಿದರು. ಅಶ್ವಿತಾ ಜಿ.ಪೈ ಮತ್ತು ವೈಷ್ಣವಿ ಶೆಣೈ ಪ್ರಾರ್ಥಿಸಿದರು.ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಸ್ವಾಗತಿಸಿದರು.ಸಂಚಾಲಕ ಡಾ.ಕಾಶೀನಾಥ ಪಿ.ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ.ರಾಘವೇಂದ್ರ ಪೈ ನಿರ್ವಹಿಸಿದರು.ಕಾರ್ಯದರ್ಶಿ ಬಿ.ಲಕ್ಷ್ಮೀಕಾಂತ ಮಡಿವಾಳ ವಂದಿಸಿದರು.

ಮಕ್ಕಳ ಕುಣಿತ ಭಜನೆ, ಹುಲಿವೇಷ ಕುಣಿತ, ವಿವಿಧ ವೇಷಭೂಷಣಗಳು ನೋಡುಗರ ಗಮನ ಸೆಳೆಯಿತು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago