News Karnataka Kannada
Thursday, May 02 2024
ಸಮುದಾಯ

ಉಡುಪಿಯಲ್ಲಿ ಶ್ರೀಕೃಷ್ಣನಿಗೆ ರಾತ್ರಿ 11.42ಕ್ಕೆ ಅರ್ಘ್ಯ ಅರ್ಪಣೆ

Arghya offered to Lord Krishna at 11.42 pm in Udupi
Photo Credit : News Kannada

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಡಗರ. ಅರ್ಘ್ಯ ಪ್ರಧಾನ ಎಂಬ ಧಾರ್ಮಿಕ ವಿಧಿಯ ಮೂಲಕ ಶ್ರೀಕೃಷ್ಣ ಪರಮಾತ್ಮನನ್ನು ಭೂಮಿಗೆ ಬರಮಾಡಿಕೊಳ್ಳಲಾಗಿದೆ. ಉಡುಪಿ ಕೃಷ್ಣ ಮಠದಲ್ಲಿ ರಾತ್ರಿ 11.42ಕ್ಕೆ ಅರ್ಘ್ಯ ಪ್ರಧಾನ ಮಾಡಲಾಯ್ತು.

ಮಠದ ಗರ್ಭಗುಡಿಯಲ್ಲಿ ಅರ್ಘ್ಯ ಪ್ರಧಾನ ಮಾಡುವ ಮೂಲಕ ಶ್ರೀ ಕೃಷ್ಣನನ್ನು ಬರಮಾಡಿಕೊಳ್ಳುವ ಸಂಪ್ರದಾಯ ಕಳೆದ 800 ವರ್ಷದಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ.

ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹಾಲು ಮತ್ತು ನೀರಿನಲ್ಲಿ ಶ್ರೀಕೃಷ್ಣನಿಗೆ ಅರ್ಘ್ಯ ನೀಡುವ ಮೂಲಕ ಶ್ರೀ ಕೃಷ್ಣನ ಜನನವಾಗುತ್ತದೆ ಎಂಬ ನಂಬಿಕೆ ಇದೆ. ಅಷ್ಟಮಠದ ಸ್ವಾಮೀಜಿಗಳು 8 ಮಠದ ಭಕ್ತರು ಕೃಷ್ಣಾಪುರ ಮಠಕ್ಕೆ ಸಂಬಂಧಪಟ್ಟ ಆಪ್ತ ವಲಯ, ಕೃಷ್ಣನ ಭಕ್ತರು ಅರ್ಘ್ಯ ಪ್ರಧಾನ ಕಾರ್ಯಕ್ರಮದಲ್ಲಿ ಭಕ್ತಿ ಭಾವದಿಂದ ಭಾಗಿಯಾಗಿದ್ದರು.

ಇಂದು ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ನಡೆಯುತ್ತದೆ. ಅಷ್ಟಮಠಗಳ ರಥ ಬೀದಿಯಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ಅನಂತೇಶ್ವರ ಚಂದ್ರಮೌಳೇಶ್ವರ ದೇವರ ಉತ್ಸವ ನಡೆಯಲಿದೆ. ಸಾವಿರಾರು ಮಂದಿ ಭಕ್ತರು ಮಠಾಧೀಶರುಗಳು ನೂರಾರು ತರಹದ ವೇಷಗಳು ಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸವಕ್ಕೆ ಮೆರುಗು ನೀಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು