News Karnataka Kannada
Sunday, April 28 2024
ಸಮುದಾಯ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

Chamarajanagar: Devotees flock to Male Mahadeshwara Hills
Photo Credit : By Author

ಚಾಮರಾಜನಗರ: ಮಣ್ಣೆತ್ತಿನ ಅಮಾವಾಸ್ಯೆಯ ಅಂಗವಾಗಿ ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭಾನುವಾರ ನಿರೀಕ್ಷೆಗೂ ಮೀರಿ ಭಕ್ತರ ಮಹಾಪೂರವೇ ಹರಿದು ಬಂದಿದೆ.

ಮಹಿಳಾ ಭಕ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದು, ಕುಟುಂಬ ಸಮೇತರಾಗಿ ಮಾದಪ್ಪನಿಗೆ ವಿವಿಧ ಸೇವೆಗಳನ್ನು ಸಲ್ಲಿಸಿ ದರ್ಶನ ಪಡೆದಿದ್ದಾರೆ. ಭಾನುವಾರ ರಜಾ ದಿನ ಆಗಿರುವುದರಿಂದ ಹಾಗೂ ಶಕ್ತಿ ಯೋಜನೆಯ ಕಾರಣಕ್ಕೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ಸರ್ಕಾರ ಕಲ್ಪಿಸಿರುವುದರಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಕೆಎಸ್ ಆರ್ ಟಿಸಿ ಬಸ್ ಗಳು ಕೊರತೆಯೂ ಉಂಟಾಗಿ ಪರದಾಡುವಂತಾಯಿತು.

ಅಮಾವಾಸ್ಯೆ ಪ್ರಯುಕ್ತ ಕೆಎಸ್ ಆರ್ ಟಿಸಿಯು 150 ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದ್ದು, ಅದೂ ಸಾಕಾಗಿಲ್ಲ. ಬಸ್ ನಿಲ್ದಾಣದಲ್ಲಿ ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು. ಮಹದೇಶ್ವರ ಬೆಟ್ಟ ಮಾತ್ರ ವಲ್ಲದೆ, ಜಿಲ್ಲೆಯ ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡು ಬಂದಿತು. ಈ ನಡುವೆ ಶನಿವಾರದಿಂದಲೇ ಕ್ಷೇತ್ರಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಬಂದಿದ್ದು, ರಾತ್ರಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡಿ ಭಾನುವಾರ ಮುಂಜಾನೆಯಿಂದಲೇ ಮಾದಪ್ಪನ ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡು ಬಂದಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು