News Karnataka Kannada
Thursday, May 02 2024
ಸಮುದಾಯ

ಚಿಕ್ಕಮಗಳೂರು: ರಂಜಾನ್ ಮಾಸದಲ್ಲಿ ಧ್ವನಿವರ್ಧಕ ಬಳಸಲು ಅನುಮತಿಗೆ ಒತ್ತಾಯ

Chikkamagaluru: Demand for permission to use loudspeakers during Ramzan
Photo Credit : News Kannada

ಚಿಕ್ಕಮಗಳೂರು: ಮುಸಲ್ಮಾನ್ ಬಾಂಧವರಿಗೆ ಒಂದು ತಿಂಗಳ ಕಾಲ ನಡೆಯುವ ಪವಿತ್ರ ರಂಜಾನ್ ಮಾಸದ ಸಮಯದಲ್ಲಿ ಧ್ವನಿವರ್ಧಕದ ಮೂಲಕ ಆಝಾನ್‌ಗೆ ಅವಕಾಶ ಮಾಡಿಕೊಡಬೇಕು ಎಂದು ಸಿ.ಎನ್.ಅಕ್ಮಲ್ ಎಜುಕೇಷನ್ ಟ್ರಸ್ಟ್ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದ ಸಮುದಾಯದ ಮುಖಂಡರುಗಳು ರಂಜಾನ್ ಸಮಯದಲ್ಲಿ ಧ್ವನಿವರ್ಧಕದ ಮೂಲಕ ಆಝಾನ್‌ಗೆ ಅವಕಾಶ ಮಾಡಿಕೊಟ್ಟು ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷ ಸಿ.ಎನ್.ಅಕ್ಮಲ್ ಮುಸಲ್ಮಾನ್ ಬಾಂಧವರಿಗೆ ರಂಜಾನ್ ಬಹಳ ಪವಿತ್ರ ಮಾಸವಾಗಿರುತ್ತದೆ. ಶಾಂತಿ, ಸಹಬಾಳ್ವೆ, ದಾನ, ಧರ್ಮ ಉಪವಾಸದೊಂದಿಗೆ ಕಟ್ಟುನಿಟ್ಟಾಗಿ ಆಝಾನ್ ಕೂಡ ರಂಜಾನ್ ಆಚರಣೆಯ ಒಂದು ಭಾಗವಾಗಿರುತ್ತದೆ ಎಂದರು.

ಇಂತಹ ಸಂದರ್ಭದಲ್ಲಿ ರಂಜಾನ್ ಉಪವಾಸ ನಡೆಯುವ ಒಂದು ತಿಂಗಳ ಬೆಳಗಿನ ಜಾವ ೫ ರಿಂದ ೫.೩೦ ರೊಳಗೆ ಧ್ವನಿವರ್ಧಕದ ಮೂಲಕ ಆಝಾನ್ ಅವಕಾಶ ಮಾಡಿಕೊಟ್ಟು ಪವಿತ್ರ ರಂಜಾನ್ ಆಚರಿಸಲು ಮುಸ್ಲೀಂ ಬಾಂಧವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಮಾಸದ ವಿಶೇಷ ಸಂದರ್ಭಗಳಲ್ಲಿ ಧಾರ್ಮಿಕ ಕಾರ್ಯಕ್ರಮ, ಕ್ರೀಡಾಕೂಟಗಳಿಗೆ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಧ್ವನಿವರ್ಧಕವನ್ನು ಬಳಸಲು ಅವಕಶ್ಯತೆಯಿರುವ ಹಿನ್ನೆಲೆಯಲ್ಲಿ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳಾದ ಕೆಂಪನಹಳ್ಳಿ ರಸೂಲ್‌ಖಾನ್, ಇರ್ಫಾನ್, ಸೈಯದ್ ಜಬಿ, ಅಜ್ಮಲ್ ಬೇಗ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು