News Karnataka Kannada
Sunday, April 28 2024
ಸಮುದಾಯ

ಕೆ.ಆರ್.ನಗರ: ಗ್ರಾಮದೇವತೆ ಹುಣಸಮ್ಮ ದೇವರ ಅದ್ಧೂರಿ ರಥೋತ್ಸವ

A grand procession of village deity Hunsamma Deva
Photo Credit : By Author

ಕೆ.ಆರ್.ನಗರ: ತಾಲೂಕಿನ ಗಂಧನಹಳ್ಳಿ ಗ್ರಾಮದ ಗ್ರಾಮದೇವತೆ ಹುಣಸಮ್ಮ ದೇವರ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಳೆದ 3 ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿ ರಥೋತ್ಸವ ಮತ್ತು ಹಬ್ಬವನ್ನು ಆಚರಿಸಿರಲಿಲ್ಲ. ಆದರೆ ಈ ಬಾರಿ ಅದ್ಧೂರಿಯಾಗಿ ಆಚರಿಸಲಾಯಿತು.

ಕಪ್ಪಡಿ ಕ್ಷೇತ್ರದ ಕಾವೇರಿ ನದಿಯಲ್ಲಿ ಹುಣಸಮ್ಮ ದೇವರ ಉತ್ಸವ ಮೂರ್ತಿಗೆ ತೀರ್ಥಸ್ನಾನ ಮಾಡಿಸಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿ ನಂತರ ಗ್ರಾಮಸ್ಥರು ಅಲಂಕೃತಗೊಂಡ ಪಲ್ಲಕಿಯಲ್ಲಿ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಿದರು.

ಇದಾದ ಬಳಿಕ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಗ್ರಾಮದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ತಂಬಿಟ್ಟು ಆರತಿ ಬೆಳಗಿದ್ದಲ್ಲದೆ ರಥಕ್ಕೆ ತಮ್ಮ ಇಷ್ಟಾರ್ಥಗಳು ಈಡೇರಿಸುವಂತೆ ಹಣ್ಣು ಜವನ ಎಸೆದು ದೇವರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಗಂಧನಹಳ್ಳಿ, ಗಂಧನಹಳ್ಳಿಕೊಪ್ಪಲು, ಕನಕನಹಳ್ಳಿ ಗ್ರಾಮಗಳ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಹಾಜರಿದ್ದರು.

ಹುಣಸಮ್ಮ ದೇವರ ರಥೋತ್ಸವದ ಅಂಗವಾಗಿ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಜಾತ್ರೆಯಲ್ಲಿ ಸಿಹಿ ತಿಂಡಿ ಮತ್ತು ಆಟಿಕೆ ಸಾಮಾನುಗಳನ್ನು ಜಾತ್ರೆಗೆ ಬಂದ ಭಕ್ತರು ಖರೀದಿ ಮಾಡುತ್ತಿದ್ದು ಸಾಮಾನ್ಯವಾಗಿತ್ತು. ರಥೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳನ್ನು ತರಳಿ ತೋರಣಗಳಿಂದ ಸಿಂಗರಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು