ಕೆ.ಆರ್.ನಗರ: ತಾಲೂಕಿನ ಗಂಧನಹಳ್ಳಿ ಗ್ರಾಮದ ಗ್ರಾಮದೇವತೆ ಹುಣಸಮ್ಮ ದೇವರ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಳೆದ 3 ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿ ರಥೋತ್ಸವ ಮತ್ತು ಹಬ್ಬವನ್ನು ಆಚರಿಸಿರಲಿಲ್ಲ. ಆದರೆ ಈ ಬಾರಿ ಅದ್ಧೂರಿಯಾಗಿ ಆಚರಿಸಲಾಯಿತು.
ಕಪ್ಪಡಿ ಕ್ಷೇತ್ರದ ಕಾವೇರಿ ನದಿಯಲ್ಲಿ ಹುಣಸಮ್ಮ ದೇವರ ಉತ್ಸವ ಮೂರ್ತಿಗೆ ತೀರ್ಥಸ್ನಾನ ಮಾಡಿಸಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿ ನಂತರ ಗ್ರಾಮಸ್ಥರು ಅಲಂಕೃತಗೊಂಡ ಪಲ್ಲಕಿಯಲ್ಲಿ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಿದರು.
ಇದಾದ ಬಳಿಕ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಗ್ರಾಮದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ತಂಬಿಟ್ಟು ಆರತಿ ಬೆಳಗಿದ್ದಲ್ಲದೆ ರಥಕ್ಕೆ ತಮ್ಮ ಇಷ್ಟಾರ್ಥಗಳು ಈಡೇರಿಸುವಂತೆ ಹಣ್ಣು ಜವನ ಎಸೆದು ದೇವರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಗಂಧನಹಳ್ಳಿ, ಗಂಧನಹಳ್ಳಿಕೊಪ್ಪಲು, ಕನಕನಹಳ್ಳಿ ಗ್ರಾಮಗಳ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಹಾಜರಿದ್ದರು.
ಹುಣಸಮ್ಮ ದೇವರ ರಥೋತ್ಸವದ ಅಂಗವಾಗಿ ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಜಾತ್ರೆಯಲ್ಲಿ ಸಿಹಿ ತಿಂಡಿ ಮತ್ತು ಆಟಿಕೆ ಸಾಮಾನುಗಳನ್ನು ಜಾತ್ರೆಗೆ ಬಂದ ಭಕ್ತರು ಖರೀದಿ ಮಾಡುತ್ತಿದ್ದು ಸಾಮಾನ್ಯವಾಗಿತ್ತು. ರಥೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳನ್ನು ತರಳಿ ತೋರಣಗಳಿಂದ ಸಿಂಗರಿಸಲಾಗಿತ್ತು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ