ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ,ಹಿಂದೂ ಅಭ್ಯುದಯ ಸಂಘ ನಾವುಂದ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಮುದ್ದುಮನೆ-ಶಿರೂರು ವತಿಯಿಂದ ಜಂಟಿ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ 123 ಜನರಿಗೆ ಉಚಿತವಾಗಿ ಕನ್ನಡಕವನ್ನು ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಶ್ರೀ ಕೆ.ಆರ್. ನಾಯ್ಕ,ಸೂಪರ್ ಗ್ರೇಡ್ ಇಲೆಕ್ನಿಕಲ್ ಕಂಟ್ರಾಕ್ಟರ್, ಹಂಗಳೂರು-ಕುಂದಾಪುರ ಅರ್ಹ ಫಲಾನುಭವಿಗಳಿಗೆ ಕನ್ನಡಕಗಳನ್ನು ವಿತರಿಸಿದರು.
ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ನಾವುಂದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಿರೂರು-ಮುದ್ದುಮನೆ ಕಣ್ಣಿನ ಆಸ್ಪತ್ರೆ ಪ್ರತಿನಿಧಿ ಶಂಕರ ಶೆಟ್ಟಿ ಕುಂದಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಾವುಂದ ಹಿಂದೂ ಅಭ್ಯುದಯ ಸಂಘದ ಅಧ್ಯಕ್ಷರಾದ ಶಶಿಧರ ಎಂ. ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಎ.ಶಿವರಾಮ ಮಧ್ಯಸ್ಥ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಸದಸ್ಯರಾದ ಸುದರ್ಶನ ಗಾಣಿಗ, ಮನೋಹರ ಎನ್.ಕೆ, ಗುರುರಾಜ ಶೇಟ್,ಜಿತೇಶ್ ಕೆ.ಪೂಜಾರಿ,ವಿಘ್ನೇಶ್ವರ ಕೆ. ನಿರ್ವಹಿಸಿದರು.