Categories: ಸಮುದಾಯ

ನಂಜನಗೂಡು: ವಿಜೃಂಭಣೆಯಿಂದ ಜರುಗಿದ ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ

ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಕಾರ್ಯ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಕಾರ್ಯ ಗ್ರಾಮದ ಸ್ವಾಮಿ ಮಠದ ಅಧ್ಯಕ್ಷರಾದ ಶ್ರೀ ಮಹೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂಜಾನೆ ಹೊಸ ನೀರು ತಂದು, ದೇವರಿಗೆ ವಿಶೇಷ ಪೂಜೆ, ಹೋಮ-ಹವನ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಉತ್ಸವ ಮೂರ್ತಿಗೆ ವಿಶೇಷವಾಗಿ ವಸ್ತ್ರಾಭರಣ, ಬಗೆ ಬಗೆಯ ಪುಷ್ಪಾಲಂಕಾರ ಮಾಡಲಾಗಿತ್ತು. ನಂತರ ಗ್ರಾಮಸ್ಥರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಬಣ್ಣದ ಬಣ್ಣದ ಬಟ್ಟೆಗಳಿಂದ , ಹೂವಿನಿಂದ ಶೃಂಗರಿಸಿದ್ದ, ರಥೋತ್ಸವಕ್ಕೆ ಶ್ರೀ ವೀರಭದ್ರೇಶ್ವರಸ್ವಾಮಿಯನ್ನು ಕುಳ್ಳಿರಿಸಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಇಡುಗಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಂಗಳ ವಾದ್ಯದೊಂದಿಗೆ ಸತ್ತಿಗೆ ಸುರಪಾಣಿ, ವೀರಗಾಸೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥವು ಸಾಗಿತು. ಗ್ರಾಮದ ಮಹಿಳೆಯರು ಮನೆ ಮುಂದೆ ರಂಗೋಲಿ ಬಿಡಿಸಿ ರಥೋತ್ಸವಕ್ಕೆ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು. ನೂತನ ನವ ದಂಪತಿಗಳು ಹಣ್ಣು ಜವನ ಎಸೆದು ಪುನೀತರಾದರು. ಭಕ್ತರು ರಥವನ್ನು ಎಳೆದು ಭಕ್ತಿ ಭಾವ ಮೆರೆದರು. ಬಳಿಕ ರಥವು ಸ್ವಸ್ಥಾನಕ್ಕೆ ಬಂದು ತಲುಪಿತು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಲ್ಲಹಳ್ಳಿ ಪೊಲೀಸರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

Ashika S

Recent Posts

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

3 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

17 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

18 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

42 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

44 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

1 hour ago